ಕಾಪು : ಪಡುಬಿದ್ರಿ ಶ್ರೀ ಬಾಲ ಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇವರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿಯಲ್ಲಿ ಪ್ರಪ್ರಥಮ ಬಾರಿಗೆ ಕೃಷಿ ಮೇಳ ಕಾರ್ಯಕ್ರಮ ಶನಿವಾರ ಉದ್ಘಾಟನೆಗೊಂಡಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ” ಒಂದು ಕಾಲದಲ್ಲಿ ಮನೆಗೊಂದು ಕಲ್ಪವೃಕ್ಷ ಕಾಮಧೇನು ಇರಬೇಕೆಂದು ಹಿರಿಯರು ಮಾಡಿರುವವ ಸಂಪ್ರದಾಯ ಕೃಷಿಯೇ ಆ ಕಾಲದಲ್ಲಿ ಜೀವನವಾಗಿತ್ತು ಆದರೇ ಇಂದಿನ ಕಾಲಘಟ್ಟದಲ್ಲಿ ಎಲ್ಲಾವೂ ಬದಲಾಗಿದೆ ಆಧುನಿಕ ಜೀವನಕ್ಕೆ ಬೇಕಾಗುವ ಸವಲತ್ತುಗಳು ಮನೆಯಂಗಳದಲ್ಲಿದೆ ಅದರ ನಡುವೆ ನೂರಾರು ವಿದ್ಯಾರ್ಥಿಗಳ ಕೂಡುವಿಕೆಯೊಂದಿಗೆ ನಡೆಯುತ್ತಿರುವ ಈ ಕೃಷಿ ಮೇಳ ಮುಂದಿನ ಜನಾಂಗಕ್ಕೆ ಕೃಷಿಯ ಮಹತ್ವದ ಸಂದೇಶ ಸಾರುವಂತಿದೆ ಎಂದರು.
ಜೈನ ಮಠ ಮೂಡಬಿದಿರೆ ಭಾರತಭೂಷಣ ಡಾ.ಸ್ವಸ್ತಿಶ್ರೀ ಚಾರುಕೀರ್ತಿವ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಾಲಾಜಿ ಆರ್ ಮೆಂಡನ್,ಕೀಶೋರ್ ಆಳ್ವಾ,ವೈ ಸುಧೀರ್ ಕುಮಾರ್,ಮೋಹನ್ ರಾಜ್,ಎಲ್ ಹೇಮಂತ ಕುಮಾರ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಶ್ರೀಮತಿ ಶಶಿಕಲ,ಪ್ರಸನ್ನ,ಸೌಮ್ಯಲತ ಶೆಟ್ಟಿ, ರೇಶ್ಮ ಮೆಂಡನ್,ರಾಯೇಶ್ ಪೈ,ಮೋಹನ್ ಸುವರ್ಣ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಶಿಕಾಂತ್ ಪಡುಬಿದ್ರಿ ಸ್ವಾಗತಿಸಿ, ದೇವಾನಂದ್ ಭಟ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಶರಾವತಿ ಆರ್ ರಾವ್ ವಂದಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…