Featured

ಪಡುಬಿದ್ರಿ: ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ಪ್ರಶಸ್ತಿ ವಿಠ್ಠಲ ಶೆಟ್ಟಿ ಪ್ರಶಸ್ತಿ – vishwanews24

ಪಡುಬಿದ್ರಿ: ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ಪ್ರಶಸ್ತಿ ವಿಠ್ಠಲ ಶೆಟ್ಟಿ ಪ್ರಶಸ್ತಿ

ಪಡುಬಿದ್ರಿ: ಶ್ರೀ ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ ಯನ್ನು ನೀಡಲಾಗುವುದು. ಜನವರಿ 11 ಶನಿವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಪಡುಬಿದ್ರಿ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ ಕಟೀಲು ಮೇಳದ 28 ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ಸನ್ಮಾನ ನಡೆಯಲಿದೆ.

ದೇವೀ ಪ್ರಸಾದ ಅವರು ಕಳೆದು ಮೂರುವರೆ ದಶಕಗಳಿಂದ ಯಕ್ಷಗಾನ ರಂಗದಲ್ಲಿ ಪ್ರಸಂಗ ರಚನೆ ಹಾಗೂ ಭಾಗವತಿಕೆ ಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದವರು.ತೆಂಕು ಹಾಗೂ ಬಡಗು ತಿಟ್ಟಿನ ಟೆಂಟ್ ಮೇಳಗಳಲ್ಲೂ ಅವರ ಪ್ರಸಂಗಗಳು ಯಶಸ್ವಿ ಪ್ರದರ್ಶನ ಕಂಡಿವೆ.

ಕಟೀಲು ಮೇಳದಲ್ಲೇ ಬಣ್ಣದ ವೇಷಧಾರಿ ಯಾಗಿ ರೂಪುಗೊಂಡು ಕಳೆದ 35 ವರ್ಷಗಳಿಂದ ಕಲಾ ಸೇವೆಗೈಯ್ಯುತ್ತಿರುವ ಸುರೇಶ ಕುಪ್ಪೆಪದವು ಅವರು ಮಹಿಷಾಸುರ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದಿದ್ದಾರೆ.

ಕಂಬಳ ಕೋಣಗಳ ಮಾಲಕರಾಗಿ ಖ್ಯಾತಿ ಪಡೆದಿದ್ದ ಮುಂಬೈ ಘಾಟಿಕೋಪರ್ ನ ಭಾರತ್ ಕೆಫೆ ಸಂಸ್ಥಾಪಕ ಪೂಲ ವಿಠ್ಠಲ ಶೆಟ್ಟಿ ಅವರ ಸ್ಮರಣಾರ್ಥ ಹಿರಿಯ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕದ್ರಿ ನವನೀತ ಶೆಟ್ಟಿ, ಐಕಳ ವಿಶ್ವನಾಥ ಶೆಟ್ಟಿ, ಎರ್ಮಾಳ್ ವಿಶುಕುಮಾರ್ ಅವರನ್ನೊಳಗೊಂಡ ಸಮಿತಿಯು ಪ್ರತೀ ವರ್ಷ ಪ್ರಶಸ್ತಿ ವಿಜೇತರ ಆಯ್ಕೆ ಮಾಡುತ್ತಿದೆ ಎಂದು ಸತೀಶ್ ವಿಠ್ಠಲ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕಟೀಲು ಮೇಳದವರಿಂದ “ರಾಮ – ಕೃಷ್ಣ – ಗೋವಿಂದ” ಯಕ್ಷಗಾನ ಬಯಲಾಟ ಪ್ರದರ್ಶನವಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago