Featured

ಪಡುಬಿದ್ರಿ: ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ಪ್ರಶಸ್ತಿ ವಿಠ್ಠಲ ಶೆಟ್ಟಿ ಪ್ರಶಸ್ತಿ – vishwanews24

ಪಡುಬಿದ್ರಿ: ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ಪ್ರಶಸ್ತಿ ವಿಠ್ಠಲ ಶೆಟ್ಟಿ ಪ್ರಶಸ್ತಿ

ಪಡುಬಿದ್ರಿ: ಶ್ರೀ ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ ಯನ್ನು ನೀಡಲಾಗುವುದು. ಜನವರಿ 11 ಶನಿವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಪಡುಬಿದ್ರಿ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ ಕಟೀಲು ಮೇಳದ 28 ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ಸನ್ಮಾನ ನಡೆಯಲಿದೆ.

ದೇವೀ ಪ್ರಸಾದ ಅವರು ಕಳೆದು ಮೂರುವರೆ ದಶಕಗಳಿಂದ ಯಕ್ಷಗಾನ ರಂಗದಲ್ಲಿ ಪ್ರಸಂಗ ರಚನೆ ಹಾಗೂ ಭಾಗವತಿಕೆ ಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದವರು.ತೆಂಕು ಹಾಗೂ ಬಡಗು ತಿಟ್ಟಿನ ಟೆಂಟ್ ಮೇಳಗಳಲ್ಲೂ ಅವರ ಪ್ರಸಂಗಗಳು ಯಶಸ್ವಿ ಪ್ರದರ್ಶನ ಕಂಡಿವೆ.

ಕಟೀಲು ಮೇಳದಲ್ಲೇ ಬಣ್ಣದ ವೇಷಧಾರಿ ಯಾಗಿ ರೂಪುಗೊಂಡು ಕಳೆದ 35 ವರ್ಷಗಳಿಂದ ಕಲಾ ಸೇವೆಗೈಯ್ಯುತ್ತಿರುವ ಸುರೇಶ ಕುಪ್ಪೆಪದವು ಅವರು ಮಹಿಷಾಸುರ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದಿದ್ದಾರೆ.

ಕಂಬಳ ಕೋಣಗಳ ಮಾಲಕರಾಗಿ ಖ್ಯಾತಿ ಪಡೆದಿದ್ದ ಮುಂಬೈ ಘಾಟಿಕೋಪರ್ ನ ಭಾರತ್ ಕೆಫೆ ಸಂಸ್ಥಾಪಕ ಪೂಲ ವಿಠ್ಠಲ ಶೆಟ್ಟಿ ಅವರ ಸ್ಮರಣಾರ್ಥ ಹಿರಿಯ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕದ್ರಿ ನವನೀತ ಶೆಟ್ಟಿ, ಐಕಳ ವಿಶ್ವನಾಥ ಶೆಟ್ಟಿ, ಎರ್ಮಾಳ್ ವಿಶುಕುಮಾರ್ ಅವರನ್ನೊಳಗೊಂಡ ಸಮಿತಿಯು ಪ್ರತೀ ವರ್ಷ ಪ್ರಶಸ್ತಿ ವಿಜೇತರ ಆಯ್ಕೆ ಮಾಡುತ್ತಿದೆ ಎಂದು ಸತೀಶ್ ವಿಠ್ಠಲ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕಟೀಲು ಮೇಳದವರಿಂದ “ರಾಮ – ಕೃಷ್ಣ – ಗೋವಿಂದ” ಯಕ್ಷಗಾನ ಬಯಲಾಟ ಪ್ರದರ್ಶನವಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

15 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

15 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

15 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

19 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

19 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

19 hours ago