ಉಡುಪಿ

ಪಡುಬಿದ್ರಿ : ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆ -Vishwanews24

ಪಡುಬಿದ್ರಿ : ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆ -Vishwanews24

ಪಡುಬಿದ್ರಿ :ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆಗೊಳ್ಳಲಿದೆ.

ಮಿನಿಸ್ಟ್ರಿ ಆಫ್ ಎನ್ವಿರಾನ್ಮೆಂಟ್, ಫಾರೆಸ್ಟ್ ಆಂಡ್ ಕ್ಲೈಮೇಟ್‌ ಚೇಂಜ್‌, ಸೊಸೈಟಿ ಫಾರ್ ಇಂಟಿಗ್ರೇಟೆಡ್ ಕೋಸ್ಟಲ್ ಮ್ಯಾನೆಜ್‌ಮೆಂಟ್‌ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯ ಉಸ್ತುವಾರಿಯಲ್ಲಿ ಈ ಬ್ಲೂ ಫ್ಲಾಗ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ.

ಪ್ರವಾಸಿಗರಿಗೆ ಅನುಕೂಲಕರ ವಾಗುವಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಬೀಚ್ ನ 100 ಮೀ. ಏರಿಯಾವನ್ನು ಸರ್ವೆ ಮಾಡಿ ಸೇಫ್ ಝೋನ್ ಆಗಿ ಪರಿಗಣಿಸಿ ಈ ಝೋನ್ ವ್ಯಾಪ್ತಿಯಲ್ಲಿ ನೆಟ್ ಗಳನ್ನು ಹಾಕಲಾಗುತ್ತದೆ. ಈ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಾಸಿಗರು ನೀರಿಗಿಳಿದು ಆಟವಾಡಬಹುದಾಗಿದೆ. ಆದರೆ ಈ ವ್ಯಾಪ್ತಿಯಲ್ಲಿ ಅಳವಡಿಸಿರುವ ನೆಟ್ ನ್ನು ಯಾವುದೇ ಕಾರಣಕ್ಕೂ ಕ್ರಾಸ್ ಮಾಡುವಂತಿಲ್ಲ. ಅಲ್ಲದೆ, ಈ ಸೇಫ್ ಝೋನ್ ಹೊರತು ಪಡಿಸಿ ಉಳಿದ ಯಾವುದೇ ಕಡೆಗಳಲ್ಲಿ ಪ್ರವಾಸಿಗರು ನೀರಿಗೆ ಇಳಿಯುವಂತಿಲ್ಲ.

ಈ ಬೀಚ್ ನಲ್ಲಿ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೀಚ್ ಕ್ಲೀನ್ ಮೂಲಕ ಶೇಖರಣೆಯಾದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಎಸ್ ಎಲ್ ಆರ್ ಎಂ ಘಟಕ ಇದ್ದು ಇದರ ಮೂಲಕ ತ್ಯಾಜ್ಯ ವಿಲೇವಾರಿ ಮಾಡಿ ಪಂಚಾಯತ್ ಗೆ ವರ್ಗಾಯಿಸಲಾಗುತ್ತದೆ. ಇದರೊಂದಿಗೆ ವಿಶಾಲವಾದ ಗಾರ್ಡನ್, ಸಿಟೌಟ್ ಅಂಬ್ರಲ್ಲಾ, ಮರದ ಜೋಕಾಲಿಗಳು, ಶುದ್ಧ ಕುಡಿಯುವ ನೀರಿನ ಘಟಕ, ಪ್ರವಾಸಿಗರಿಗಾಗಿ ವ್ಯವಸ್ಥಿತವಾದ ಶೌಚಾಲಯಗಳು, ಡ್ರೆಸ್ಸಿಂಗ್ ರೂಮ್ ಗಳ ಸೌಲಭ್ಯನೂ ಇದೆ. ಬೀಚ್ ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ,ಮುಂಜಾಗೃತಾ ಕ್ರಮವಾಗಿ ಎಲ್ಲೆಡೆ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆಗೆ ದೇಶದ 13 ಬೀಚ್ ಅಭಿವೃದ್ಧಿಪಡಿಸಲಾಗಿತ್ತು. ಈ ಪೈಕಿ ಎಲ್ಲಾ ಅಗತ್ಯ ನಿಯಮಗಳ ಪಾಲನೆ ಮತ್ತು ಗುಣಮಟ್ಟ ಹೊಂದಿರುವ 8 ಬೀಚ್ ಗಳನ್ನು ರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಿ ಅಂತರರಾಷ್ಟ್ರೀಯ ಜ್ಯೂರಿಗೆ ಕಳುಹಿಸಲಾಗಿತ್ತು. ಇಲ್ಲಿ ಆಯ್ಕೆಯಾದ 8 ಬೀಚ್ ಗಳಲ್ಲಿ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚ್ ಸಹ ಸೇರಿದೆ ಎಂಬುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಚಾರ. ಉಡುಪಿ ಜಿಲ್ಲೆಯ ಹೆಮ್ಮೆಯ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚ್ ನಲ್ಲಿ 33 ಮಾನದಂಡಗಳನ್ನು ಆಧರಿಸಿ ಬ್ಲೂ ಫ್ಲಾಗ್ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago