ಉಡುಪಿ

ಪಡುಬಿದ್ರಿ : ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆ -Vishwanews24

ಪಡುಬಿದ್ರಿ : ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆ -Vishwanews24

ಪಡುಬಿದ್ರಿ :ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆಗೊಳ್ಳಲಿದೆ.

ಮಿನಿಸ್ಟ್ರಿ ಆಫ್ ಎನ್ವಿರಾನ್ಮೆಂಟ್, ಫಾರೆಸ್ಟ್ ಆಂಡ್ ಕ್ಲೈಮೇಟ್‌ ಚೇಂಜ್‌, ಸೊಸೈಟಿ ಫಾರ್ ಇಂಟಿಗ್ರೇಟೆಡ್ ಕೋಸ್ಟಲ್ ಮ್ಯಾನೆಜ್‌ಮೆಂಟ್‌ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯ ಉಸ್ತುವಾರಿಯಲ್ಲಿ ಈ ಬ್ಲೂ ಫ್ಲಾಗ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ.

ಪ್ರವಾಸಿಗರಿಗೆ ಅನುಕೂಲಕರ ವಾಗುವಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಬೀಚ್ ನ 100 ಮೀ. ಏರಿಯಾವನ್ನು ಸರ್ವೆ ಮಾಡಿ ಸೇಫ್ ಝೋನ್ ಆಗಿ ಪರಿಗಣಿಸಿ ಈ ಝೋನ್ ವ್ಯಾಪ್ತಿಯಲ್ಲಿ ನೆಟ್ ಗಳನ್ನು ಹಾಕಲಾಗುತ್ತದೆ. ಈ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಾಸಿಗರು ನೀರಿಗಿಳಿದು ಆಟವಾಡಬಹುದಾಗಿದೆ. ಆದರೆ ಈ ವ್ಯಾಪ್ತಿಯಲ್ಲಿ ಅಳವಡಿಸಿರುವ ನೆಟ್ ನ್ನು ಯಾವುದೇ ಕಾರಣಕ್ಕೂ ಕ್ರಾಸ್ ಮಾಡುವಂತಿಲ್ಲ. ಅಲ್ಲದೆ, ಈ ಸೇಫ್ ಝೋನ್ ಹೊರತು ಪಡಿಸಿ ಉಳಿದ ಯಾವುದೇ ಕಡೆಗಳಲ್ಲಿ ಪ್ರವಾಸಿಗರು ನೀರಿಗೆ ಇಳಿಯುವಂತಿಲ್ಲ.

ಈ ಬೀಚ್ ನಲ್ಲಿ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೀಚ್ ಕ್ಲೀನ್ ಮೂಲಕ ಶೇಖರಣೆಯಾದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಎಸ್ ಎಲ್ ಆರ್ ಎಂ ಘಟಕ ಇದ್ದು ಇದರ ಮೂಲಕ ತ್ಯಾಜ್ಯ ವಿಲೇವಾರಿ ಮಾಡಿ ಪಂಚಾಯತ್ ಗೆ ವರ್ಗಾಯಿಸಲಾಗುತ್ತದೆ. ಇದರೊಂದಿಗೆ ವಿಶಾಲವಾದ ಗಾರ್ಡನ್, ಸಿಟೌಟ್ ಅಂಬ್ರಲ್ಲಾ, ಮರದ ಜೋಕಾಲಿಗಳು, ಶುದ್ಧ ಕುಡಿಯುವ ನೀರಿನ ಘಟಕ, ಪ್ರವಾಸಿಗರಿಗಾಗಿ ವ್ಯವಸ್ಥಿತವಾದ ಶೌಚಾಲಯಗಳು, ಡ್ರೆಸ್ಸಿಂಗ್ ರೂಮ್ ಗಳ ಸೌಲಭ್ಯನೂ ಇದೆ. ಬೀಚ್ ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ,ಮುಂಜಾಗೃತಾ ಕ್ರಮವಾಗಿ ಎಲ್ಲೆಡೆ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆಗೆ ದೇಶದ 13 ಬೀಚ್ ಅಭಿವೃದ್ಧಿಪಡಿಸಲಾಗಿತ್ತು. ಈ ಪೈಕಿ ಎಲ್ಲಾ ಅಗತ್ಯ ನಿಯಮಗಳ ಪಾಲನೆ ಮತ್ತು ಗುಣಮಟ್ಟ ಹೊಂದಿರುವ 8 ಬೀಚ್ ಗಳನ್ನು ರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಿ ಅಂತರರಾಷ್ಟ್ರೀಯ ಜ್ಯೂರಿಗೆ ಕಳುಹಿಸಲಾಗಿತ್ತು. ಇಲ್ಲಿ ಆಯ್ಕೆಯಾದ 8 ಬೀಚ್ ಗಳಲ್ಲಿ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚ್ ಸಹ ಸೇರಿದೆ ಎಂಬುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಚಾರ. ಉಡುಪಿ ಜಿಲ್ಲೆಯ ಹೆಮ್ಮೆಯ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚ್ ನಲ್ಲಿ 33 ಮಾನದಂಡಗಳನ್ನು ಆಧರಿಸಿ ಬ್ಲೂ ಫ್ಲಾಗ್ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

5 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

5 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

5 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

5 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

6 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

7 hours ago