ಪಡುಬಿದ್ರಿ : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಸರಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಥಳಕ್ಕೆ ದಾಳಿ ಮಾಡಿದ ಅಧಿಕಾರಿಗಳು 2,87,606 ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪುವಿನ ಆಹಾರ ನಿರೀಕ್ಷಕರಾದ ಟಿ.ಲೀಲಾನಂದ ಅವರು, ಕಾಪು ಪೊಲೀಸರ ಸಹಕಾರದೊಂಡಿಗೆ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿನ ಮೊಹಮದ್ ಶಫೀಕ್ ಎಂಬವರ ಮನೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ 2,87,606 ರೂ. ಮೌಲ್ಯದ 13,073 ಕೆ.ಜಿ. ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಪತ್ತೆಯಾಗಿದೆ.
ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆಯಾದ ಅಕ್ಕಿ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…