ಪಡುಬಿದ್ರಿ : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಸರಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಥಳಕ್ಕೆ ದಾಳಿ ಮಾಡಿದ ಅಧಿಕಾರಿಗಳು 2,87,606 ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪುವಿನ ಆಹಾರ ನಿರೀಕ್ಷಕರಾದ ಟಿ.ಲೀಲಾನಂದ ಅವರು, ಕಾಪು ಪೊಲೀಸರ ಸಹಕಾರದೊಂಡಿಗೆ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿನ ಮೊಹಮದ್ ಶಫೀಕ್ ಎಂಬವರ ಮನೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ 2,87,606 ರೂ. ಮೌಲ್ಯದ 13,073 ಕೆ.ಜಿ. ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಪತ್ತೆಯಾಗಿದೆ.
ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆಯಾದ ಅಕ್ಕಿ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…