Featured

ಪಡುಬಿದ್ರಿ : ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ  – Vishwanews24

ಪಡುಬಿದ್ರಿ: ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

ಪಡುಬಿದ್ರಿ: ಅದಮಾರು ಮಠದ ಆಡಳಿತಕ್ಕೊಳಪಟ್ಟ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು ಶುಕ್ರವಾರ ಬೆಳಗ್ಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಶ್ರೀಮತಿ ಯಶೋಧರವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, ನೂರರ, ಐವತ್ತರ ಮತ್ತು 500ರ ನೋಟ್‌ಗಳು ಚೆಲ್ಲಿತ್ತು. ಕೆಲವು ನೋಟ್‌ಗಳನ್ನು ಹರಿದು ಎಸೆಯಲಾಗಿತ್ತು.

ನವೀನ್ ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ,ಘಟನಾ ಸ್ಥಳಕ್ಕೆ ಸ್ಥಳೀಯರಾದ ಸಂತೋಷ್ ಶೆಟ್ಟಿ ಬರ್ಪಾಣಿಯವರು ಆಗಮಿಸಿ ಪಡುಬಿದ್ರಿ ಪೊಲೀಸರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪೊಲೀಸರು ಪರ್ಸನ್ನು ಪರೀಕ್ಷಿಸಿದಾಗ, ಅದರಲ್ಲಿ ಅವರ ಫೊಟೋ ಮತ್ತು ಅದಮಾರು ಸಂಸ್ಥೆಯ ಪತ್ರ ಸಿಕ್ಕಿದೆ. ಇದರಿಂದಾಗಿ ನವೀನ್ ರವರು ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದರವರು ಬಾವಿಯಲ್ಲಿ ಹುಡುಕಾಡಿದಾಗ ನವೀನ್‌ ಮೃತ ದೇಹ ಸಿಕ್ಕಿದ್ದು, ಅದನ್ನು ಹೊರತೆಗೆದಿದ್ದಾರೆ.

ಅವಿವಾಹಿತರಾದ ನವೀನ್ ರವರು ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago