Featured

ಪಡುಬಿದ್ರಿ : ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ  – Vishwanews24

ಪಡುಬಿದ್ರಿ: ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

ಪಡುಬಿದ್ರಿ: ಅದಮಾರು ಮಠದ ಆಡಳಿತಕ್ಕೊಳಪಟ್ಟ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು ಶುಕ್ರವಾರ ಬೆಳಗ್ಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಶ್ರೀಮತಿ ಯಶೋಧರವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, ನೂರರ, ಐವತ್ತರ ಮತ್ತು 500ರ ನೋಟ್‌ಗಳು ಚೆಲ್ಲಿತ್ತು. ಕೆಲವು ನೋಟ್‌ಗಳನ್ನು ಹರಿದು ಎಸೆಯಲಾಗಿತ್ತು.

ನವೀನ್ ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ,ಘಟನಾ ಸ್ಥಳಕ್ಕೆ ಸ್ಥಳೀಯರಾದ ಸಂತೋಷ್ ಶೆಟ್ಟಿ ಬರ್ಪಾಣಿಯವರು ಆಗಮಿಸಿ ಪಡುಬಿದ್ರಿ ಪೊಲೀಸರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪೊಲೀಸರು ಪರ್ಸನ್ನು ಪರೀಕ್ಷಿಸಿದಾಗ, ಅದರಲ್ಲಿ ಅವರ ಫೊಟೋ ಮತ್ತು ಅದಮಾರು ಸಂಸ್ಥೆಯ ಪತ್ರ ಸಿಕ್ಕಿದೆ. ಇದರಿಂದಾಗಿ ನವೀನ್ ರವರು ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದರವರು ಬಾವಿಯಲ್ಲಿ ಹುಡುಕಾಡಿದಾಗ ನವೀನ್‌ ಮೃತ ದೇಹ ಸಿಕ್ಕಿದ್ದು, ಅದನ್ನು ಹೊರತೆಗೆದಿದ್ದಾರೆ.

ಅವಿವಾಹಿತರಾದ ನವೀನ್ ರವರು ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago