Featured

ಪಡುಬಿದ್ರಿ : ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ  – Vishwanews24

ಪಡುಬಿದ್ರಿ: ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

ಪಡುಬಿದ್ರಿ: ಅದಮಾರು ಮಠದ ಆಡಳಿತಕ್ಕೊಳಪಟ್ಟ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು ಶುಕ್ರವಾರ ಬೆಳಗ್ಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಶ್ರೀಮತಿ ಯಶೋಧರವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, ನೂರರ, ಐವತ್ತರ ಮತ್ತು 500ರ ನೋಟ್‌ಗಳು ಚೆಲ್ಲಿತ್ತು. ಕೆಲವು ನೋಟ್‌ಗಳನ್ನು ಹರಿದು ಎಸೆಯಲಾಗಿತ್ತು.

ನವೀನ್ ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ,ಘಟನಾ ಸ್ಥಳಕ್ಕೆ ಸ್ಥಳೀಯರಾದ ಸಂತೋಷ್ ಶೆಟ್ಟಿ ಬರ್ಪಾಣಿಯವರು ಆಗಮಿಸಿ ಪಡುಬಿದ್ರಿ ಪೊಲೀಸರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪೊಲೀಸರು ಪರ್ಸನ್ನು ಪರೀಕ್ಷಿಸಿದಾಗ, ಅದರಲ್ಲಿ ಅವರ ಫೊಟೋ ಮತ್ತು ಅದಮಾರು ಸಂಸ್ಥೆಯ ಪತ್ರ ಸಿಕ್ಕಿದೆ. ಇದರಿಂದಾಗಿ ನವೀನ್ ರವರು ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದರವರು ಬಾವಿಯಲ್ಲಿ ಹುಡುಕಾಡಿದಾಗ ನವೀನ್‌ ಮೃತ ದೇಹ ಸಿಕ್ಕಿದ್ದು, ಅದನ್ನು ಹೊರತೆಗೆದಿದ್ದಾರೆ.

ಅವಿವಾಹಿತರಾದ ನವೀನ್ ರವರು ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

11 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

45 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago