Featured

ಪಡುಬಿದ್ರಿ : ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ  – Vishwanews24

ಪಡುಬಿದ್ರಿ: ಅದಮಾರು ಶಾಲೆಯ ರಾತ್ರಿ ಕವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

ಪಡುಬಿದ್ರಿ: ಅದಮಾರು ಮಠದ ಆಡಳಿತಕ್ಕೊಳಪಟ್ಟ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು ಶುಕ್ರವಾರ ಬೆಳಗ್ಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಶ್ರೀಮತಿ ಯಶೋಧರವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, ನೂರರ, ಐವತ್ತರ ಮತ್ತು 500ರ ನೋಟ್‌ಗಳು ಚೆಲ್ಲಿತ್ತು. ಕೆಲವು ನೋಟ್‌ಗಳನ್ನು ಹರಿದು ಎಸೆಯಲಾಗಿತ್ತು.

ನವೀನ್ ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ,ಘಟನಾ ಸ್ಥಳಕ್ಕೆ ಸ್ಥಳೀಯರಾದ ಸಂತೋಷ್ ಶೆಟ್ಟಿ ಬರ್ಪಾಣಿಯವರು ಆಗಮಿಸಿ ಪಡುಬಿದ್ರಿ ಪೊಲೀಸರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪೊಲೀಸರು ಪರ್ಸನ್ನು ಪರೀಕ್ಷಿಸಿದಾಗ, ಅದರಲ್ಲಿ ಅವರ ಫೊಟೋ ಮತ್ತು ಅದಮಾರು ಸಂಸ್ಥೆಯ ಪತ್ರ ಸಿಕ್ಕಿದೆ. ಇದರಿಂದಾಗಿ ನವೀನ್ ರವರು ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದರವರು ಬಾವಿಯಲ್ಲಿ ಹುಡುಕಾಡಿದಾಗ ನವೀನ್‌ ಮೃತ ದೇಹ ಸಿಕ್ಕಿದ್ದು, ಅದನ್ನು ಹೊರತೆಗೆದಿದ್ದಾರೆ.

ಅವಿವಾಹಿತರಾದ ನವೀನ್ ರವರು ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago