ಪಡುಬಿದ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಅವರಿಬ್ಬರೂ ಪಡುಬಿದ್ರಿಯಲ್ಲಿ ಗೂಡ್ಸ್ ಟೆಂಪೋ ಬಾಡಿಗೆ ನಡೆಸಿ ಜೀವನ ಸಾಗಿಸುತ್ತಿದ್ದರು. ಸಂಜೀವ ಅವರು 40 ವರ್ಷ ಹಾಗೂ ಉದಯ 20 ವರ್ಷ ಚಾಲಕರಾಗಿ ದುಡಿದಿದ್ದರು. ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದರು. ಉದಯ ಕೆಲವು ದಿನಗಳ ಹಿಂದೆ ಜ್ವರ ಬಾಧೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಿಧನರಾಗಿದ್ದರು. ಅವರ ಅಂತ್ಯ ಸಂಸ್ಕಾರ ಪೂರ್ಣಗೊಂಡ ಬಳಿಕ ಹಾಸಿಗೆ ಹಿಡಿದಿದ್ದ ಸಂಜೀವ ಅವರೂ ಸಾವನ್ನಪ್ಪಿದ್ದು ವಿಪರ್ಯಾಸವಾಗಿತ್ತು.
ಪತ್ನಿ, 2 ಪುತ್ರರು ಹಾಗೂ 2 ಪುತ್ರಿಯರೊಂದಿಗೆ ಬಡತನದಲ್ಲಿಯೇ ಜೀವನ ಸಾಗಿಸುತ್ತಿದ್ದ ಸಂಜೀವ ಅವರ ಓರ್ವ ಮಗ ಈ ಹಿಂದೆಯೇ ನಿಧನ ಹೊಂದಿದ್ದರು. ಬಳಿಕ ಅವರಿಬ್ಬರೂ ಅನಾರೋಗ್ಯಕ್ಕೆ ತುತ್ತಾಗಿ ಕುಟುಂಬ ಕಂಗಾಲಾಗಿತ್ತು. ಇದೀಗ ಅವರಿಬ್ಬರ ಸಾವು ಪತ್ನಿ, ಹಾಗೂ ಅವಿವಾಹಿತ ಪುತ್ರಿಯರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…