ಪಡುಬಿದ್ರಿ: ಉಡುಪಿ ಯಿಂದ ಹೆಜಮಾಡಿ ಟೋಲ್ಗೇಟ್ನತ್ತ ಬಂದಿದ್ದ ಎಸ್ಡಿಪಿಐ ನಾಯಕ ರಿಯಾಜ್ ಕಡುಂಬು ಹಾಗೂ ಮತ್ತಿತರರು ಅನುಮತಿ ಇಲ್ಲದೆ ಜಾಥಾ ನಡೆಸಿರುವ ಕಾರಣಕ್ಕೆ ಅವರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಜಾಥಾವನ್ನು “ಯೂಟರ್ನ್ ರಾಜ್ಯ ಸರಕಾರದ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 2′ ಎಂಬು ದಾಗಿ ಸಂಘಟಿಸಲಾಗಿತ್ತು.
ಈ ಕುರಿತಾದ ಅನುಮತಿಯನ್ನು ಪಡೆಯಲಾಗಿದೆಯೇ ಎಂದು ಹೆಜಮಾಡಿಗೆ ಆಗಮಿಸಿದ್ದ ಜಾಥಾದ ನಾಯಕ ರಿಯಾಜ್ ಕಡುಂಬು ಅವರಲ್ಲಿ ಠಾಣೆಯ ಪಿಎಸ್ಐ ಪ್ರಸನ್ನ ಪ್ರಶ್ನಿಸಿದ್ದರು. ಆಗ ಅನುಮತಿ ಪಡೆದಿಲ್ಲ ಎನ್ನುವುದನ್ನು ಎಸ್ಡಿಪಿಐ ನಾಯಕರು ಪೊಲೀಸರಿಗೆ ತಿಳಿಸಿದ್ದರು.
ಅನುಮತಿ ಇಲ್ಲದ ಜಾಥಾದಲ್ಲಿ ಕಾರು ಬೈಕ್ಗಳಲ್ಲಿನ 75 – 100 ಜನರ ಅಕ್ರಮ ಗುಂಪು ಹೆದ್ದಾರಿ ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಲಿದೆ. ಇದು ಸರಿಯಲ್ಲ ಎಂದು ಪ್ರಸನ್ನ ಅವರು ವಿವರಿಸಿದ್ದರು ಎಂದು ತಿಳಿಸಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…