Featured

ಪಡುಬಿದ್ರಿ:  ಅನುಮತಿ ಇಲ್ಲದೆ ಜಾಥಾ: SDPI ಮುಖಂಡರ ವಿರುದ್ಧ ಪ್ರಕರಣ ದಾಖಲು – vishwanews24

ಪಡುಬಿದ್ರಿ: ಅನುಮತಿ ಇಲ್ಲದೆ ಜಾಥಾ: ಎಸ್ಡಿಪಿಐ ಮುಖಂಡರ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ: ಉಡುಪಿ ಯಿಂದ ಹೆಜಮಾಡಿ ಟೋಲ್‌ಗೇಟ್‌ನತ್ತ ಬಂದಿದ್ದ ಎಸ್‌ಡಿಪಿಐ ನಾಯಕ ರಿಯಾಜ್‌ ಕಡುಂಬು ಹಾಗೂ ಮತ್ತಿತರರು ಅನುಮತಿ ಇಲ್ಲದೆ ಜಾಥಾ ನಡೆಸಿರುವ ಕಾರಣಕ್ಕೆ ಅವರ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಜಾಥಾವನ್ನು “ಯೂಟರ್ನ್ ರಾಜ್ಯ ಸರಕಾರದ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್‌ ಜಾಥಾ – 2′ ಎಂಬು ದಾಗಿ ಸಂಘಟಿಸಲಾಗಿತ್ತು.

ಈ ಕುರಿತಾದ ಅನುಮತಿಯನ್ನು ಪಡೆಯಲಾಗಿದೆಯೇ ಎಂದು ಹೆಜಮಾಡಿಗೆ ಆಗಮಿಸಿದ್ದ ಜಾಥಾದ ನಾಯಕ ರಿಯಾಜ್‌ ಕಡುಂಬು ಅವರಲ್ಲಿ ಠಾಣೆಯ ಪಿಎಸ್‌ಐ ಪ್ರಸನ್ನ ಪ್ರಶ್ನಿಸಿದ್ದರು. ಆಗ ಅನುಮತಿ ಪಡೆದಿಲ್ಲ ಎನ್ನುವುದನ್ನು ಎಸ್‌ಡಿಪಿಐ ನಾಯಕರು ಪೊಲೀಸರಿಗೆ ತಿಳಿಸಿದ್ದರು.

ಅನುಮತಿ ಇಲ್ಲದ ಜಾಥಾದಲ್ಲಿ ಕಾರು ಬೈಕ್‌ಗಳಲ್ಲಿನ 75 – 100 ಜನರ ಅಕ್ರಮ ಗುಂಪು ಹೆದ್ದಾರಿ ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಲಿದೆ. ಇದು ಸರಿಯಲ್ಲ ಎಂದು ಪ್ರಸನ್ನ ಅವರು ವಿವರಿಸಿದ್ದರು ಎಂದು ತಿಳಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago