Featured

ಪಡುಬಿದ್ರಿ :ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಹೆಜಮಾಡಿ ಯುವಕ ಯಾಸಿನ್‌ ಬಂಧನ – Vishwanews24

ಪಡುಬಿದ್ರಿ :ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಹೆಜಮಾಡಿ ಯುವಕ ಯಾಸಿನ್‌ ಬಂಧನ

ಪಡುಬಿದ್ರಿ: ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ನೀಡಿದ್ದ ಹೆಜಮಾಡಿ ಯುವಕನೋರ್ವನನ್ನು ಪೋಕ್ಸೊ ಪ್ರಕರಣದಡಿ ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೆಜಮಾಡಿ ಆಲಡೆ ಬಳಿಯ ನಿವಾಸಿ ಅಬ್ದುಲ್‌ ರೆಹಮಾನ್‌ ಅವರ ಮಗ ಯಾಸಿನ್‌ (19) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ಸಹಕಾರ ನೀಡಿದ್ದ ಅಪ್ರಾಪ್ತ ವಯಸ್ಕ ಬಾಲಕನನ್ನೂ ವಶಪಡಿಸಿಕೊಂಡಿರುವ ಪೊಲೀಸರು ಆತನನ್ನು ಬಾಲಮಂದಿರಕ್ಕೆ ಸೇರಿಸಿದ್ದಾರೆ.

ಆರೋಪಿ ಯಾಸಿನ್‌, ಎರಡು ಬಾರಿ ಅಪಾರ್ಟ್‌ಮೆಂಟ್‌ಗೆ ಕರೆತಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬಾಲಕಿಯನ್ನು ಬಸ್‌ನಲ್ಲಿ ಬರಲು ಹೇಳಿದ್ದ ಆರೋಪಿಯು ಬಸ್ಸಿಳಿದು ರಿಕ್ಷಾ ಮೂಲಕ ಹೆಜಮಾಡಿಯ ತಾನು ವಾಸವಿರುವ ಆಪಾರ್ಟ್‌ಮೆಂಟ್‌ಗೆ ಕರೆಸಿದ್ದನು. ಬಾಲಕಿಯನ್ನು ಮೇಲ್ಮಹಡಿಯ ಟೆರೇಸ್‌ನಲ್ಲಿರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತಾಗಿ ಸ್ಥಳೀಯರು ಅನುಮಾನ ದಿಂದ ಪಡುಬಿದ್ರಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಪೊಲೀಸರು ಸಕಾಲದಲ್ಲಿ ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಬಾಲಕಿಯ ತಂದೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

9 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

12 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

14 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

15 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

15 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

15 hours ago