Featured

ಪಡುಬಿದ್ರಿ : ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕನಿಂದ ಹಲ್ಲೆ – Vishwanews24

ಪಡುಬಿದ್ರಿ : ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕನಿಂದ ಹಲ್ಲೆ

ಪಡುಬಿದ್ರಿ  :ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕ ಬಸ್ಸನ್ನು ತಡೆದು ಚಾಲಕನಿಗೆ ಹಲ್ಲೆಗೈದ ಘಟನೆ ಇಂದು ಬೆಳಗ್ಗೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.

ಪಡುಬಿದ್ರಿ ನಿವಾಸಿ ಬಸ್ ಚಾಲಕ ಶೈಲು ಯಾನೆ ಶೈಲೇಶ್ ಘಟನೆಯಲ್ಲಿ ಮುಖದ ಭಾಗಕ್ಕೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಲ್ಕಿ ಕೊಲ್ನಾಡ್ ಪರಿಸರದ ಯುವಕ ಕೃತ್ಯ ಎಸಗಿದವನು ಎಂದು ಹೇಳಲಾಗುತ್ತಿದೆ. ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್ ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿರುವಾಗ ಎರ್ಮಾಳ್ ಸಮೀಪ ಕಾರ್ ಚಾಲಕನಿಗೆ ಸೈಡ್ ಕೊಡುವಂತೆ ಹಾರ್ನ್ ಹಾಕಿ ಓವರ್ ಟೇಕ್ ಮಾಡಿದ್ದ, ಬಳಿಕ ಹಿಂಬಾಲಿಸಿಕೊಂಡು ಬಂದ ಕಾರು ಚಾಲಕ ಬಸ್ಸನ್ನು ತಡೆದು ಚಾಲಕ ಶೈಲು ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago