ಪಡುಬಿದ್ರಿ: ಕಂಟೈನರ್ ಲಾರಿಯನ್ನು ಅದರ ಚಾಲಕ ನಿರ್ಲಕ್ಷ್ಯದಿಂದ ಹೆದ್ದಾರಿಯಲ್ಲೇ ನಿಲ್ಲಿಸಿದ ಕಾರಣ ಮಂಗಳವಾರ ಸಂಜೆಯ ವೇಳೆ ಸುರಿಯುತ್ತಿದ್ದ ಮಳೆ ನಡುವೆ ಕೊಲ್ಲೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ತಡೆರಹಿತ ಬಸ್ಸೊಂದು ಕಂಟೈನರ್ ಹಿಂಬದಿಗೆ ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮಳೆಗಾಲದಲ್ಲಿ ತೀರಾ ಅಪಾಯಕಾರಿ ಎನಿಸಿರುವ ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ ತಿರುವೊಂದರಲ್ಲಿ ಈ ಅಪಘಾತವು ಸಂಭವಿಸಿದೆ.
ಉಡುಪಿ-ಮಂಗಳೂರು ದ್ವಿಪಥ ಹೆದ್ದಾರಿಯಲ್ಲಿ ರಸ್ತೆಯ ಎಡಭಾಗದಲ್ಲೇ ಚಲಿಸುತ್ತಿದ್ದ ಬಸ್ಸಿನ ಬಲಭಾಗದಲ್ಲೂ ಈ ಅಪಘಾತವು ಸಂಭವಿಸಿದ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರೇ ವಾಹನಗಳಿದ್ದವು. ಹಾಗಾಗಿ ಕಂಟೈನರ್ ಲಾರಿ ಚಾಲಕನು ಯಾವುದೇ ಮುನ್ಸೂಚನೆಗಳಿಲ್ಲದೇ ನಿಲ್ಲಿಸಿದಾಗ ಈ ಘಟನೆಯು ಸಂಭವಿಸಿದೆ.
ಹೆದ್ದಾರಿಯಿಂದ ರಸ್ತೆ ಬದಿಗೆ ಸರಿಸದೇ ಹೆದ್ದಾರಿಯಲ್ಲೇ ಲಾರಿಯನ್ನು ನಿಲ್ಲಿಸಿದ್ದರಿಂದ ಹಿಂಬದಿಯಲ್ಲಿದ್ದ ಬಸ್ಸನ್ನು ನಿಲ್ಲಿಸಲು ಬ್ರೇಕ್ ಹಾಕಿದಾಗಲೂ ಮಳೆಗೆ ಬಸ್ಸು ನಿಯಂತ್ರಣಕ್ಕೆ ಬಂದಿರಲಿಲ್ಲ. ತನ್ನ ಬಲಗಡೆಗೆ ತೆಗೆದುಕೊಳ್ಳಲೂ ಆಗದ ಸ್ಥಿತಿಯಲ್ಲಿ ಬಸ್ಸು ಕಂಟೈನರ್ ಹಿಂಬದಿಗೆ ಢಿಕ್ಕಿಯಾಗಿದೆ.
ಸ್ಥಳಕ್ಕೆ ಪಡುಬಿದ್ರಿ ಠಾಣಾ ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿಗಳು ಭೇಟಿ ನೀಡಿದ್ದಾರೆ. ಕಂಟೈನರ್ ಚಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…