ಪಡುಬಿದ್ರಿ: ಕಂಟೈನರ್ ಲಾರಿಯನ್ನು ಅದರ ಚಾಲಕ ನಿರ್ಲಕ್ಷ್ಯದಿಂದ ಹೆದ್ದಾರಿಯಲ್ಲೇ ನಿಲ್ಲಿಸಿದ ಕಾರಣ ಮಂಗಳವಾರ ಸಂಜೆಯ ವೇಳೆ ಸುರಿಯುತ್ತಿದ್ದ ಮಳೆ ನಡುವೆ ಕೊಲ್ಲೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ತಡೆರಹಿತ ಬಸ್ಸೊಂದು ಕಂಟೈನರ್ ಹಿಂಬದಿಗೆ ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮಳೆಗಾಲದಲ್ಲಿ ತೀರಾ ಅಪಾಯಕಾರಿ ಎನಿಸಿರುವ ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ ತಿರುವೊಂದರಲ್ಲಿ ಈ ಅಪಘಾತವು ಸಂಭವಿಸಿದೆ.
ಉಡುಪಿ-ಮಂಗಳೂರು ದ್ವಿಪಥ ಹೆದ್ದಾರಿಯಲ್ಲಿ ರಸ್ತೆಯ ಎಡಭಾಗದಲ್ಲೇ ಚಲಿಸುತ್ತಿದ್ದ ಬಸ್ಸಿನ ಬಲಭಾಗದಲ್ಲೂ ಈ ಅಪಘಾತವು ಸಂಭವಿಸಿದ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರೇ ವಾಹನಗಳಿದ್ದವು. ಹಾಗಾಗಿ ಕಂಟೈನರ್ ಲಾರಿ ಚಾಲಕನು ಯಾವುದೇ ಮುನ್ಸೂಚನೆಗಳಿಲ್ಲದೇ ನಿಲ್ಲಿಸಿದಾಗ ಈ ಘಟನೆಯು ಸಂಭವಿಸಿದೆ.
ಹೆದ್ದಾರಿಯಿಂದ ರಸ್ತೆ ಬದಿಗೆ ಸರಿಸದೇ ಹೆದ್ದಾರಿಯಲ್ಲೇ ಲಾರಿಯನ್ನು ನಿಲ್ಲಿಸಿದ್ದರಿಂದ ಹಿಂಬದಿಯಲ್ಲಿದ್ದ ಬಸ್ಸನ್ನು ನಿಲ್ಲಿಸಲು ಬ್ರೇಕ್ ಹಾಕಿದಾಗಲೂ ಮಳೆಗೆ ಬಸ್ಸು ನಿಯಂತ್ರಣಕ್ಕೆ ಬಂದಿರಲಿಲ್ಲ. ತನ್ನ ಬಲಗಡೆಗೆ ತೆಗೆದುಕೊಳ್ಳಲೂ ಆಗದ ಸ್ಥಿತಿಯಲ್ಲಿ ಬಸ್ಸು ಕಂಟೈನರ್ ಹಿಂಬದಿಗೆ ಢಿಕ್ಕಿಯಾಗಿದೆ.
ಸ್ಥಳಕ್ಕೆ ಪಡುಬಿದ್ರಿ ಠಾಣಾ ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿಗಳು ಭೇಟಿ ನೀಡಿದ್ದಾರೆ. ಕಂಟೈನರ್ ಚಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…