Featured

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ರೂ.3.84 ಹಣ ಪಡೆದು ಲಕ್ಷ ವಂಚನೆ – Vishwanews24

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ರೂ.3.84 ಹಣ ಪಡೆದು ಲಕ್ಷ ವಂಚನೆ

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಣ ಪಡೆದು 3.84 ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ವಂಚನೆಗೆ ಒಳಗಾದ ಪಶ್ಚಿಮ ಬಂಗಾಳ ಮೂಲದ ಪ್ರಸ್ತುತ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ನಾರಾಯಣಚಂದ್ರ ರಾಯ್ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ಯುಪಿಸಿಎಲ್ ಅದಾನಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು ಕಂಪೆನಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಪರಿಚಯದ ಜಾರ್ಖಂಡ್ ಮೂಲದ ಶಿವೇಶ್ ಕುಮಾರ್ ಎಂಬಾತ ಜಾರ್ಖಾಂಡ್‌ನಲ್ಲಿದ್ದು ಕೊಂಡು ನಾರಾಯಣ ಅವರಿಗೆ QNET ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ಹಾಗೂ ಒಳ್ಳೆಯ ಲಾಭಾಂಶ ನೀಡುವುದಾಗಿ ನಂಬಿಸಿದ್ದ. ಹಾಗೂ 2020 ರ ನ.18 ರಿಂದ ಡಿ.12 ರ ವರೆಗೆ ಹಂತ ಹಂತವಾಗಿ 5,60,000 ರೂ. ಹಣವನ್ನು ಗೂಗಲ್ ಪೇ ಮತ್ತು ನೆಪ್ಟ್ ಮುಖಾಂತರ ಆಪಾದಿತನ ಖಾತೆಗೆ ವರ್ಗಾಯಿಸಿ ಕೊಂಡಿದ್ದನು. ಈ ವ್ಯವಹಾರದಲ್ಲಿ ಆಪಾದಿತನು ನಾರಾಯಣ ಅವರಿಗೆ ಅನುಪಯುಕ್ತ ವಸ್ತುಗಳನ್ನು ಕಳುಹಿಸಿ ಅದರ ಮೊತ್ತವನ್ನು ರೂಪಾಯಿ 5,94,256/- ಎಂಬುದಾಗಿ ಬಿಲ್‌ನಲ್ಲಿ ನಮೂದಿಸಿ ನಾರಾಯಣ ಅವರ ವಿಳಾಸಕ್ಕೆ ಕಳುಹಿಸಿದ್ದನು. ಈ ವಸ್ತುಗಳನ್ನು ನಾರಾಯಣ ಅವರು ಸ್ವೀಕರಿಸಿ ವಸ್ತುಗಳು ಅನುಪಯುಕ್ತ ವಸ್ತುವಾಗಿರುವುದರಿಂದಆಪಾದಿತನಿಗೆ ವಾಪಾಸು ಕಳುಹಿಸಿರುತ್ತಾರೆ. ಹಾಗೂ ಈ ಬಗ್ಗೆ ವಿಚಾರಿಸಿದಾಗ ಅಪಾದಿತನು 2022 ರ ಮಾ.4 ರಂದು ರೂ. 1,75,199 ಹಣವನ್ನು ನಾರಾಯಣ ಅವರ ಖಾತೆಗೆ ನೆಪ್ಟ್ ಮುಖಾಂತರ ಹಿಂದಿರುಗಿಸಿದ್ದಾನೆ. ಆದರೆ ಉಳಿದ 3,84,801 ರೂ.ನ್ನು ಕೇಳಿದಾಗ ಹಣವನ್ನು ವಾಪಾಸ್ಸು ನೀಡದೇ, ವ್ಯವಹಾರದಲ್ಲೂ ತೊಡಗಿಸದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

4 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

6 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

8 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

8 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

10 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

10 hours ago