Featured

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ರೂ.3.84 ಹಣ ಪಡೆದು ಲಕ್ಷ ವಂಚನೆ – Vishwanews24

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ರೂ.3.84 ಹಣ ಪಡೆದು ಲಕ್ಷ ವಂಚನೆ

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಣ ಪಡೆದು 3.84 ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ವಂಚನೆಗೆ ಒಳಗಾದ ಪಶ್ಚಿಮ ಬಂಗಾಳ ಮೂಲದ ಪ್ರಸ್ತುತ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ನಾರಾಯಣಚಂದ್ರ ರಾಯ್ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ಯುಪಿಸಿಎಲ್ ಅದಾನಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು ಕಂಪೆನಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಪರಿಚಯದ ಜಾರ್ಖಂಡ್ ಮೂಲದ ಶಿವೇಶ್ ಕುಮಾರ್ ಎಂಬಾತ ಜಾರ್ಖಾಂಡ್‌ನಲ್ಲಿದ್ದು ಕೊಂಡು ನಾರಾಯಣ ಅವರಿಗೆ QNET ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ಹಾಗೂ ಒಳ್ಳೆಯ ಲಾಭಾಂಶ ನೀಡುವುದಾಗಿ ನಂಬಿಸಿದ್ದ. ಹಾಗೂ 2020 ರ ನ.18 ರಿಂದ ಡಿ.12 ರ ವರೆಗೆ ಹಂತ ಹಂತವಾಗಿ 5,60,000 ರೂ. ಹಣವನ್ನು ಗೂಗಲ್ ಪೇ ಮತ್ತು ನೆಪ್ಟ್ ಮುಖಾಂತರ ಆಪಾದಿತನ ಖಾತೆಗೆ ವರ್ಗಾಯಿಸಿ ಕೊಂಡಿದ್ದನು. ಈ ವ್ಯವಹಾರದಲ್ಲಿ ಆಪಾದಿತನು ನಾರಾಯಣ ಅವರಿಗೆ ಅನುಪಯುಕ್ತ ವಸ್ತುಗಳನ್ನು ಕಳುಹಿಸಿ ಅದರ ಮೊತ್ತವನ್ನು ರೂಪಾಯಿ 5,94,256/- ಎಂಬುದಾಗಿ ಬಿಲ್‌ನಲ್ಲಿ ನಮೂದಿಸಿ ನಾರಾಯಣ ಅವರ ವಿಳಾಸಕ್ಕೆ ಕಳುಹಿಸಿದ್ದನು. ಈ ವಸ್ತುಗಳನ್ನು ನಾರಾಯಣ ಅವರು ಸ್ವೀಕರಿಸಿ ವಸ್ತುಗಳು ಅನುಪಯುಕ್ತ ವಸ್ತುವಾಗಿರುವುದರಿಂದಆಪಾದಿತನಿಗೆ ವಾಪಾಸು ಕಳುಹಿಸಿರುತ್ತಾರೆ. ಹಾಗೂ ಈ ಬಗ್ಗೆ ವಿಚಾರಿಸಿದಾಗ ಅಪಾದಿತನು 2022 ರ ಮಾ.4 ರಂದು ರೂ. 1,75,199 ಹಣವನ್ನು ನಾರಾಯಣ ಅವರ ಖಾತೆಗೆ ನೆಪ್ಟ್ ಮುಖಾಂತರ ಹಿಂದಿರುಗಿಸಿದ್ದಾನೆ. ಆದರೆ ಉಳಿದ 3,84,801 ರೂ.ನ್ನು ಕೇಳಿದಾಗ ಹಣವನ್ನು ವಾಪಾಸ್ಸು ನೀಡದೇ, ವ್ಯವಹಾರದಲ್ಲೂ ತೊಡಗಿಸದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago