Featured

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ರೂ.3.84 ಹಣ ಪಡೆದು ಲಕ್ಷ ವಂಚನೆ – Vishwanews24

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ರೂ.3.84 ಹಣ ಪಡೆದು ಲಕ್ಷ ವಂಚನೆ

ಪಡುಬಿದ್ರಿ : ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಣ ಪಡೆದು 3.84 ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ವಂಚನೆಗೆ ಒಳಗಾದ ಪಶ್ಚಿಮ ಬಂಗಾಳ ಮೂಲದ ಪ್ರಸ್ತುತ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ನಾರಾಯಣಚಂದ್ರ ರಾಯ್ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ಯುಪಿಸಿಎಲ್ ಅದಾನಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು ಕಂಪೆನಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಪರಿಚಯದ ಜಾರ್ಖಂಡ್ ಮೂಲದ ಶಿವೇಶ್ ಕುಮಾರ್ ಎಂಬಾತ ಜಾರ್ಖಾಂಡ್‌ನಲ್ಲಿದ್ದು ಕೊಂಡು ನಾರಾಯಣ ಅವರಿಗೆ QNET ಕಂಪೆನಿಯ ವ್ಯವಹಾರದಲ್ಲಿ ತೊಡಗಿಸುವುದಾಗಿ ಹಾಗೂ ಒಳ್ಳೆಯ ಲಾಭಾಂಶ ನೀಡುವುದಾಗಿ ನಂಬಿಸಿದ್ದ. ಹಾಗೂ 2020 ರ ನ.18 ರಿಂದ ಡಿ.12 ರ ವರೆಗೆ ಹಂತ ಹಂತವಾಗಿ 5,60,000 ರೂ. ಹಣವನ್ನು ಗೂಗಲ್ ಪೇ ಮತ್ತು ನೆಪ್ಟ್ ಮುಖಾಂತರ ಆಪಾದಿತನ ಖಾತೆಗೆ ವರ್ಗಾಯಿಸಿ ಕೊಂಡಿದ್ದನು. ಈ ವ್ಯವಹಾರದಲ್ಲಿ ಆಪಾದಿತನು ನಾರಾಯಣ ಅವರಿಗೆ ಅನುಪಯುಕ್ತ ವಸ್ತುಗಳನ್ನು ಕಳುಹಿಸಿ ಅದರ ಮೊತ್ತವನ್ನು ರೂಪಾಯಿ 5,94,256/- ಎಂಬುದಾಗಿ ಬಿಲ್‌ನಲ್ಲಿ ನಮೂದಿಸಿ ನಾರಾಯಣ ಅವರ ವಿಳಾಸಕ್ಕೆ ಕಳುಹಿಸಿದ್ದನು. ಈ ವಸ್ತುಗಳನ್ನು ನಾರಾಯಣ ಅವರು ಸ್ವೀಕರಿಸಿ ವಸ್ತುಗಳು ಅನುಪಯುಕ್ತ ವಸ್ತುವಾಗಿರುವುದರಿಂದಆಪಾದಿತನಿಗೆ ವಾಪಾಸು ಕಳುಹಿಸಿರುತ್ತಾರೆ. ಹಾಗೂ ಈ ಬಗ್ಗೆ ವಿಚಾರಿಸಿದಾಗ ಅಪಾದಿತನು 2022 ರ ಮಾ.4 ರಂದು ರೂ. 1,75,199 ಹಣವನ್ನು ನಾರಾಯಣ ಅವರ ಖಾತೆಗೆ ನೆಪ್ಟ್ ಮುಖಾಂತರ ಹಿಂದಿರುಗಿಸಿದ್ದಾನೆ. ಆದರೆ ಉಳಿದ 3,84,801 ರೂ.ನ್ನು ಕೇಳಿದಾಗ ಹಣವನ್ನು ವಾಪಾಸ್ಸು ನೀಡದೇ, ವ್ಯವಹಾರದಲ್ಲೂ ತೊಡಗಿಸದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

15 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago