ಪಡುಬಿದ್ರಿ: ಇಲ್ಲಿಗೆ ಸಮೀಪದ ನಂದಿಕೂರಿನಲ್ಲಿ ಎಂ11 ಕಂಪನಿ ಹೊರ ಸೂಸುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ತರು ಸಮಸ್ಯೆ ಎದುರಿಸುತ್ತಿದ್ದು ಸ್ಥಳಕ್ಕೆ ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಮಲತಾ ಶೆಟ್ಟಿ ಭೇಟಿ ನೀಡಿದರು.
ಸ್ಥಳೀಯ ಹೋರಾಟಗಾರರು ಹಾಗೂ ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಕಂಪೆನಿಯ ಆಯಿಲ್ ಮಿಶ್ರಿತ ನೀರು ಇಡೀ ಪುದೇಶವನ್ನು ಗಬ್ಬೆದ್ದು ನಾರುವಂತೆ ಮಾಡಿದೆ. ಐದು ನಿಮಿಷ ನಿಂತರೂ ತಲೆ ಸುತ್ತು ಬರುತ್ತೆ. ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯರು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ.
ಮಳೆ ನೀರಿನೊಂದಿಗೆ ಹೊರ ಬರುವ ಕಂಪನಿಯ ರಾಸಾಯನಿಕ ಮಿಶ್ರಿತ ನೀರನ್ನು ಪರಿಸರ ಇಲಾಖೆ ಅಧಿಕಾರಿಗಳು ಪರೀಕ್ಷೆಗೊಳಪಡಿಸಲು ತೆಗೆದುಕೊಂಡು ಹೋಗಿದ್ದಾರೆ. ಜನರಿಗೆ ಸಮಸ್ಯೆ ಒಡ್ಡುತ್ತಿರುವ ಈ ಕಂಪನಿಯ ವಿರುದ್ಧ ಹೋರಾಟಕ್ಕೂ ನಾವು ಸಿದ್ಧ. ಈ ಬಗ್ಗೆ ಗ್ರಾ.ಪಂ. ಮಟ್ಟದಲ್ಲೂ ಕಂಪನಿಯ ವಿರುದ್ಧ ನಿರ್ಣಯ ಕೈಗೊಳ್ಳುವುದಾಗಿ ಪಂಚಾಯತ್ ಅಧ್ಯಕ್ಷೆ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…