ಪಡುಬಿದ್ರಿ: ಇಲ್ಲಿಗೆ ಸಮೀಪದ ನಂದಿಕೂರಿನಲ್ಲಿ ಎಂ11 ಕಂಪನಿ ಹೊರ ಸೂಸುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ತರು ಸಮಸ್ಯೆ ಎದುರಿಸುತ್ತಿದ್ದು ಸ್ಥಳಕ್ಕೆ ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಮಲತಾ ಶೆಟ್ಟಿ ಭೇಟಿ ನೀಡಿದರು.
ಸ್ಥಳೀಯ ಹೋರಾಟಗಾರರು ಹಾಗೂ ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಕಂಪೆನಿಯ ಆಯಿಲ್ ಮಿಶ್ರಿತ ನೀರು ಇಡೀ ಪುದೇಶವನ್ನು ಗಬ್ಬೆದ್ದು ನಾರುವಂತೆ ಮಾಡಿದೆ. ಐದು ನಿಮಿಷ ನಿಂತರೂ ತಲೆ ಸುತ್ತು ಬರುತ್ತೆ. ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯರು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ.
ಮಳೆ ನೀರಿನೊಂದಿಗೆ ಹೊರ ಬರುವ ಕಂಪನಿಯ ರಾಸಾಯನಿಕ ಮಿಶ್ರಿತ ನೀರನ್ನು ಪರಿಸರ ಇಲಾಖೆ ಅಧಿಕಾರಿಗಳು ಪರೀಕ್ಷೆಗೊಳಪಡಿಸಲು ತೆಗೆದುಕೊಂಡು ಹೋಗಿದ್ದಾರೆ. ಜನರಿಗೆ ಸಮಸ್ಯೆ ಒಡ್ಡುತ್ತಿರುವ ಈ ಕಂಪನಿಯ ವಿರುದ್ಧ ಹೋರಾಟಕ್ಕೂ ನಾವು ಸಿದ್ಧ. ಈ ಬಗ್ಗೆ ಗ್ರಾ.ಪಂ. ಮಟ್ಟದಲ್ಲೂ ಕಂಪನಿಯ ವಿರುದ್ಧ ನಿರ್ಣಯ ಕೈಗೊಳ್ಳುವುದಾಗಿ ಪಂಚಾಯತ್ ಅಧ್ಯಕ್ಷೆ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…