Featured

ಪಡುಬಿದ್ರಿ : ಕಂಪೆನಿ ಹೊರಬಿಡುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ಥರಿಗೆ ತೊಂದರೆ – vishwanews24

ಪಡುಬಿದ್ರಿ : ಕಂಪೆನಿ ಹೊರಬಿಡುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ಥರಿಗೆ ತೊಂದರೆ

ಪಡುಬಿದ್ರಿ: ಇಲ್ಲಿಗೆ ಸಮೀಪದ ನಂದಿಕೂರಿನಲ್ಲಿ ಎಂ11 ಕಂಪನಿ ಹೊರ ಸೂಸುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ತರು ಸಮಸ್ಯೆ ಎದುರಿಸುತ್ತಿದ್ದು ಸ್ಥಳಕ್ಕೆ ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಮಲತಾ ಶೆಟ್ಟಿ ಭೇಟಿ ನೀಡಿದರು.

ಸ್ಥಳೀಯ ಹೋರಾಟಗಾರರು ಹಾಗೂ ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಕಂಪೆನಿಯ ಆಯಿಲ್ ಮಿಶ್ರಿತ ನೀರು ಇಡೀ ಪುದೇಶವನ್ನು ಗಬ್ಬೆದ್ದು ನಾರುವಂತೆ ಮಾಡಿದೆ. ಐದು ನಿಮಿಷ ನಿಂತರೂ ತಲೆ ಸುತ್ತು ಬರುತ್ತೆ. ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯರು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ.

ಮಳೆ ನೀರಿನೊಂದಿಗೆ ಹೊರ ಬರುವ ಕಂಪನಿಯ ರಾಸಾಯನಿಕ ಮಿಶ್ರಿತ ನೀರನ್ನು ಪರಿಸರ ಇಲಾಖೆ ಅಧಿಕಾರಿಗಳು ಪರೀಕ್ಷೆಗೊಳಪಡಿಸಲು ತೆಗೆದುಕೊಂಡು ಹೋಗಿದ್ದಾರೆ. ಜನರಿಗೆ ಸಮಸ್ಯೆ ಒಡ್ಡುತ್ತಿರುವ ಈ ಕಂಪನಿಯ ವಿರುದ್ಧ ಹೋರಾಟಕ್ಕೂ ನಾವು ಸಿದ್ಧ. ಈ ಬಗ್ಗೆ ಗ್ರಾ.ಪಂ. ಮಟ್ಟದಲ್ಲೂ ಕಂಪನಿಯ ವಿರುದ್ಧ ನಿರ್ಣಯ ಕೈಗೊಳ್ಳುವುದಾಗಿ ಪಂಚಾಯತ್ ಅಧ್ಯಕ್ಷೆ ತಿಳಿಸಿದ್ದಾರೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

9 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

21 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

36 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

43 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

47 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

52 minutes ago