ಪಡುಬಿದ್ರಿ : ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ.
ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದ್ದು, ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು ಹೊಂದಿದ್ದು, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮೊದಲು ಸಿಂಗಲ್ ರಸ್ತೆ ಇರುವಾಗಲೂ ಈ ತಿರುವಿನಲ್ಲಿ ಬಹಳಷ್ಟು ಅಪಘಾತಗಳು ಸಂಭವಿಸಿ ಪ್ರಾಣಹಾನಿ ಸಂಭವಿಸಿದೆ.
ರಸ್ತೆ ಚತುಷ್ಪಥಗೊಳ್ಳುವ ಸಂದರ್ಭದಲ್ಲೂ ಹೆದ್ದಾರಿ ನೇರಗೊಳಿಸುವ ಪ್ರಕ್ರಿಯೆ ನಡೆಸದ ಕಾರಣ ಈಗಲೂ ಆ ತಿರುವು ಬಹಳಷ್ಟು ಅಪಘಾತಗಳಿಗೆ ನಾಂದಿಯಾಗುತ್ತಿದೆ. ಈ ಭಾಗದಲ್ಲಿ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಪಕ್ಕದ ಗದ್ದೆಗೆ ಉರುಳುತ್ತಿದ್ದರೂ ಹೆದ್ದಾರಿ ಇಲಾಖೆ ತನಗೆ ಸಂಬಂಧವೇ ಇಲ್ಲದಂದೆ ವರ್ತಿಸುತ್ತಿದ್ದಾರೆ ಎಂಬುವುದು ಸಾರ್ವಜನಿಕರ ಆರೋಪ. ಹೆಜಮಾಡಿ ಟೋಲ್ ಸಿಬ್ಬಂದಿಗಳು ವಾಹನಗಳ ತೆರವು ಕಾರ್ಯ ನಡೆಸಿದರು. ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸಿ ವಾಹನಗಳನ್ನು ಠಾಣೆಗೆ ಸಾಗಿಸಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…