ಪಡುಬಿದ್ರಿ: ಕಾರು ಹಾಗೂ ಬಸ್ಸು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೋಮವಾರ ಸಂಜೆ ಉಡುಪಿ ಪಡುಬಿದ್ರಿ ಬೀಡು ಬಳಿ ನಡೆದಿದೆ.
ಮೃತ ಯುವತಿಯನ್ನು ಮಂಗಳೂರು ಕುಪ್ಪೆ ಪದವು ಮೂಲದ ನಿಕ್ಷಿತಾ (21) ಎಂದು ಗುರುತಿಸಲಾಗಿದೆ.
ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ವಾಮಂಜೂರು ನಿವಾಸಿ ಗುರುಕಿರಣ್ ತೀವ್ರ ಗಾಯಗೊಂಡಿದ್ದು, ಮುಲ್ಕಿ ಕಿಲ್ಪಾಡಿ ಗೇರುಕಟ್ಟೆ ಅಮೃತಾನಂದ ನಗರದ ನಿವಾಸಿ ಧನುಷ್ (23), ಮುಲ್ಕಿ ಬಪ್ಪನಾಡಿನ ಆಲಿತೋಟ ನಿವಾಸಿ ಹರ್ಷಿಣಿ (17) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಅತೀವ ವೇಗದಿಂದ ಮುಲ್ಕಿ ಕಡೆಯಿಂದ ಉಡುಪಿಯತ್ತ ಸಂಚರಿಸುತಿದ್ದು, ಪಡುಬಿದ್ರಿ ಬೀಡು ಬಳಿವಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲಿಂದ ಹಾರಿ ಉಡುಪಿ ಕಡೆಯಿಂದ ಸಂಚರಿಸುತಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ.
ಘಟನೆ ನಡೆದ ತಕ್ಷಣ ಗಾಯಗಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರು ಸಹಕರಿಸಿದರು. ಪಡುಬಿದ್ರಿ ಠಾಣಾಧಿಕಾರಿ ಮತ್ತು ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಿಕೊಟ್ಟರು.
ಪಡುಬಿದ್ರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…