Featured

ಪಡುಬಿದ್ರಿ : ಕಾರು ಹಾಗೂ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಯುವತಿ ದಾರುಣ ಸಾವು -Vishwanews24

ಪಡುಬಿದ್ರಿ:  ಕಾರು ಹಾಗೂ ಬಸ್ಸು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೋಮವಾರ ಸಂಜೆ ಉಡುಪಿ ಪಡುಬಿದ್ರಿ ಬೀಡು ಬಳಿ ನಡೆದಿದೆ.

ಮೃತ ಯುವತಿಯನ್ನು ಮಂಗಳೂರು ಕುಪ್ಪೆ ಪದವು ಮೂಲದ ನಿಕ್ಷಿತಾ (21) ಎಂದು ಗುರುತಿಸಲಾಗಿದೆ.

ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ವಾಮಂಜೂರು ನಿವಾಸಿ ಗುರುಕಿರಣ್ ತೀವ್ರ ಗಾಯಗೊಂಡಿದ್ದು, ಮುಲ್ಕಿ ಕಿಲ್ಪಾಡಿ ಗೇರುಕಟ್ಟೆ ಅಮೃತಾನಂದ ನಗರದ ನಿವಾಸಿ ಧನುಷ್ (23), ಮುಲ್ಕಿ ಬಪ್ಪನಾಡಿನ ಆಲಿತೋಟ ನಿವಾಸಿ ಹರ್ಷಿಣಿ (17) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಅತೀವ ವೇಗದಿಂದ ಮುಲ್ಕಿ ಕಡೆಯಿಂದ ಉಡುಪಿಯತ್ತ ಸಂಚರಿಸುತಿದ್ದು, ಪಡುಬಿದ್ರಿ ಬೀಡು ಬಳಿವಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲಿಂದ ಹಾರಿ ಉಡುಪಿ ಕಡೆಯಿಂದ ಸಂಚರಿಸುತಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ.

ಘಟನೆ ನಡೆದ ತಕ್ಷಣ ಗಾಯಗಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರು ಸಹಕರಿಸಿದರು. ಪಡುಬಿದ್ರಿ ಠಾಣಾಧಿಕಾರಿ ಮತ್ತು ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಿಕೊಟ್ಟರು.

ಪಡುಬಿದ್ರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

6 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

23 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

28 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

35 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago