ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಎಲ್ಲೂರು ಗ್ರಾಮದ ದಳಂತ್ರ ಕೆರೆ ಸಮೀಪದ ಕೃಷ್ಣರಾಜ ಹೆಗಡೆ ಅವರ ಮನೆಗೆ ಎ. 12ರಂದು ಸಂಜೆ ಬಂದ ಪಾಲಡ್ಕ ನಿವಾಸಿ ಶರತ್ ಎಂಬಾತನು ಮನೆ ಮಾಲಕಿಯ ಆಭರಣ ದೋಚಲು ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಇದೇ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಶುಕ್ರವಾರ ಸಂಜೆ ಮನೆಗೆ ಬಂದು ಕುಡಿಯಲು ನೀರು ಕೇಳಿದ್ದ. ಮನೆ ಮಾಲಕಿ ಸುನೀತಿ ಹೆಗಡೆ ನೀರು ತರಲು ಒಳಗೆ ಹೋದಾಗ ಆರೋಪಿಯು ಹಿಂಬಾಲಿಸಿಕೊಂಡು ಹೋಗಿದ್ದ. ಮಹಿಳೆಯನ್ನು ಅಡುಗೆ ಮನೆಯಿಂದ ಸ್ನಾನದSet featured image ಕೋಣೆಯವರೆಗೆ ತಳ್ಳಿಕೊಂಡು ಹೋಗಿ ಅಲ್ಲಿ ಬೀಳಿಸಿದ್ದ. ಬಳಿಕ ಬಾತ್ಟವೆಲ್ನಲ್ಲಿ ಉಸಿರುಗಟ್ಟಿಸಲು ಯತ್ನಿಸಿ ಕುತ್ತಿಗೆಯಲ್ಲಿದ್ದ ಬಂಗಾರದ ಕರಿಮಣಿ ಸರವನ್ನು ಕಸಿಯಲು ಮುಂದಾಗಿದ್ದ. ಈ ಸಂದರ್ಭದಲ್ಲಿ ಕೃಷ್ಣರಾಜ ಹೆಗಡೆ ಹೊರಗೆ ಹೋಗಿದ್ದರು.
ಮಹಿಳೆಯು ಬೊಬ್ಬೆ ಹಾಕಿದ್ದು, ಅದನ್ನು ಕೇಳಿಸಿ ಕೃಷ್ಣರಾಜ ಹೆಗಡೆ ಓಡಿ ಬಂದಾಗ ಆರೋಪಿಯು ಪರಾರಿಯಾಗಿದ್ದ. ಪಡುಬಿದ್ರಿ ಪೊಲೀಸರು ಈತನನ್ನು ಕೇವಲ 12 ತಾಸುಗಳಲ್ಲಿ ಮುದರಂಗಡಿಯಲ್ಲಿ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…