ಪಡುಬಿದ್ರಿ: ಸುಳ್ಳು ಮಾಹಿತಿ ನೀಡಿ ವ್ಯಕ್ತಿಯೊರ್ವರ ಖಾತೆಯನ್ನು ನಿಯಂತ್ರಣಕ್ಕೆ ಪಡೆದು ಕೋಟ್ಯಾಂತರ ರೂ. ವ್ಯವಹಾರ ನಡೆಸಿ ವಂಚಿಸಿದ ಬಗ್ಗೆ ಸಂತ್ರಸ್ತರು ನೀಡಿದ ದೂರಿನಂತೆ ಉಡುಪಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಹೆಜಮಾಡಿ ಶಿವ ನಗರ ನಿವಾಸಿ ಸಂದಿ ಯಾನೇ ಸಂದೇಶ್ ಶೆಟ್ಟಿ, ವಿಶಾಲ್ ಬಂಗೇರ ಹಾಗೂ ಕೋಲ್ಕತ್ತದ ರೋಹನ್ ಡೇ. ಈ ಆರೋಪಿಗಳ ವಂಚನೆಗೆ ಒಳಗಾದವರು ಭದ್ರಾವತಿಯ ಕೂಡ್ಲಿಗೆರೆಯ ರುಮಾನ್ ಎನ್, ಇವರು ಉಡುಪಿಯ ಮಲ್ಪೆಯಲ್ಲಿ ಎ.ಎಂ.ಎಫ್. ಫಿಶ್ ಕಂಪನಿಯಲ್ಲಿ ಫಿಶ್ ಲೋಡಿಂಗ್ ಕೆಲಸವನ್ನು ಮಾಡಿಕೊಂಡಿದ್ದ ವೇಳೆ ಸಂಸ್ಥೆಯ ಮ್ಯಾನೇಜರ್ ಮಂಜೇಶ್ ಬಂಗೇರ ಮೂಲಕ ಹೆಜಮಾಡಿಯ ಸಂದೇಶ್ ಶೆಟ್ಟಿ ಮತ್ತು ವಿಶಾಲ್ ಎಂಬವರ ಪರಿಚಯವಾಗಿದ್ದು, ಆ ಸಂದರ್ಭ ತಮ್ಮ ಕೃತ್ಯಕ್ಕೆ ಮುಹೂರ್ತ ಇಟ್ಟಿ ಇವರು ನಾವು ಪ್ರತ್ಯೇಕ ಫಿಶ್ ಟ್ರಾನ್ಸ್ ಪೋರ್ಟ್ ಮಾಡುವವರಿದ್ದು, ಈ ವ್ಯವಹಾರಕ್ಕೆ ಬ್ಯಾಂಕ್ ಕರೆಂಟ್ ಅಕೌಂಟ್ ಗಳ ಅಗತ್ಯವಿದೆ ಎಂದು ತಿಳಿಸಿ, ಮ್ಯಾನೇಜರ್ ಮಂಜೇಶ್ ಬಂಗೇರ ಇವರ ಮಲ್ಪೆ ವಂಢಭಾಂಡೇಶ್ವರದ ಮನೆಗೆ “ಎಸ್ ಬಿ” ಎಂಟರ್ ಪ್ರೈಸಸ್ ನಲ್ಲಿ ಫಿಶ್ ಟ್ರಾನ್ಸ್ ಪೋರ್ಟ್ ಎಂಬುದಾಗಿ ಬ್ಯಾನರ್ ಅಳವಡಿಸಿ ಈ ಮನೆ ನಮ್ಮ ಕಛೇರಿ ಎಂಬುದಾಗಿ ನಂಬಿಸಿ ರುಮಾನ್ ಹೆಸರಲ್ಲಿ ಉಡುಪಿಯ ವಿವಿಧ ಬ್ಯಾಂಕ್ ಗಳಲ್ಲಿ ಖಾತೆ ಮಾಡಿಸಿ, ಅದರ ಪಾಸ್ ಪುಸ್ತಕ, ಚೆಕ್ ಪುಸ್ತಕ ಹಾಗೂ ಗೂಗಲ್ ಫೇ ಸ್ಪೀಕರ್ ರನ್ನು ಸಂದೇಶ್ ಶೆಟ್ಟಿ ಪಡೆದುಕೊಂಡಿದ್ದು, ತದ ನಂತರ ಇನ್ನೊರ್ವ ಆರೋಪಿ ವಿಶಾಲ್ ರುಮಾನ್ ರವರನ್ನು ಕೋಲ್ಕತ್ತಾಕ್ಕೆ ಕರೆದುಕೊಂಡು ಹೋಗಿ ಅಲ್ಲಿ ರೋಹನ್ ಡೇ ಎಂಬಾತನೊಂದಿಗೆ ಸೇರಿಕೊಂಡು, ನಾಲ್ಕು ದಿನ ಬೇರೆ ಬೇರೆ ಲಾಡ್ಜ್ ಗಳ ಕೊಠಡಿಗಳಲ್ಲಿ ಇದ್ದು, ರುಮಾನ್ ರವರ ಮೊಬೈಲ್ ಗೆ ಬರುವ ಒಟಿಪಿ ಗಳನ್ನು ಪಡೆಯುವುದಲ್ಲದೆ, ಆರೋಪಿಗಳು ತಮ್ಮ ಮೊಬೈಲ್ ಗೆ ಬರುತ್ತಿದ್ದ ವಿಡಿಯೋ ಕಾಲ್ ಗಳಿಗೆ ರುಮಾನ್ ಮುಖವನ್ನು ತೋರಿಸಿ ಅವರು ಮಾತನಾಡಿಸುತ್ತಿದ್ದರು, ಈ ಮಧ್ಯೆ ರುಮಾನ್ ತಾನು ಊರಿಗೆ ಹೋಗ ಬೇಕು ಹಣ ಬೇಕು ಎಂದಾಗ ಆರೋಪಿಗಳು ಹಲ್ಲೆ ನಡೆಸಿದ್ದಲ್ಲದೆ ನಾವು ಹೇಳಿದಾಗೆ ನೀನು ಕೇಳದಿದ್ದರೆ ನಿನಗೆ ಗತಿ ಕಾಣಿಸುತ್ತೇವೆ ಎಂದು ಬೆದರಿಕೆಯೊಡ್ಡಿದ್ದರು.
ಇದನ್ನೂ ಓದಿ:
ಊರಿಗೆ ಬಂದ ಬಳಿಕ ಸಂಶಯಗೊಂಡ ರುಮಾನ್ ತನ್ನಲ್ಲಿ ಖಾತೆ ಮಾಡಿಕೊಂಡಿದ್ದ ಬ್ಯಾಂಕ್ ಗಳಿಗೆ ಕರೆ ಮಾಡಿ ವಿಚಾರಿಸಿದಾಗ ತನ್ನ ಕರೆಂಟ್ ಖಾತೆಯಲ್ಲಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಆಗಿರುವುದು ತಿಳಿದಿದೆ, ಆರೋಪಿಗಳಾದ ಹೆಜಮಾಡಿ ಸಂದೇಶ್ ಶೆಟ್ಟಿ, ವಿಶಾಲ್ ಹಾಗೂ ರೋಹನ್ ಇವರುಗಳು ಘೋರವಾದ ಆರ್ಥಿಕ ಅಪರಾಧ ನಡೆಸಲು ದೂರುದಾರ ರುಮಾನ್ ರವರನ್ನು ನಂಬಿಸಿ, “ಎಸ್ ಬಿ” ಎಂಟರ್ ಪ್ರೈಸಸ್ ಎಂಬ ಸಂಸ್ಥೆಯ ಹೆಸರಲ್ಲಿ ಬ್ಯಾಂಕಿನ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡುವಂತೆ ಉತ್ತೇಜಿಸಿ ರುಮಾನ್ ಕರೆಂಟ್ ಖಾತೆಯನ್ನು ತಮ್ಮ ನಿಯಂತ್ರಣಕ್ಕೆ ಪಡೆದು, ಆ ಮೂಲಕ ಅಪರಿಚಿತರಿಗೆ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿ, ವಂಚಿಸಿದ ಹಣವನ್ನು ರುಮಾನ್ ಹೆಸರಲ್ಲಿರುವ ಎಸ್ ಬಿ ಎಂಟರ್ ಪ್ರೈಸಸ್ ಕರೆಂಟ್ ಖಾತೆಯಲ್ಲಿ ವರ್ಗಾವಣೆ ಮಾಡಿ ಖಾತೆಯನ್ನು ದುರುಪಯೋಗ ಪಡಿಸಿ ವಂಚಿಸಿ ದ್ರೋಹ ಎಸಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಡುಪಿ ಸೈಬರ್ ಕ್ರೈಮ್ ಅಧಿಕಾರಿಗಳು ಪ್ರಮುಖ ಆರೋಪಿ ಹೆಜಮಾಡಿ ಸಂದೇಶ್ ಶೆಟ್ಟಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…