Featured

ಪಡುಬಿದ್ರಿ: ಕೋಟ್ಯಾಂತರ ರೂ. ಸೈಬರ್  ಕ್ರೈಮ್ ಪ್ರಕರಣ: ಆರೋಪಿ ಬಂಧನ – vishwanews24

ಪಡುಬಿದ್ರಿ:  ಕೋಟ್ಯಾಂತರ ರೂ. ಸೈಬರ್  ಕ್ರೈಮ್ ಪ್ರಕರಣ: ಆರೋಪಿ ಬಂಧನ..

ಪಡುಬಿದ್ರಿ: ಸುಳ್ಳು ಮಾಹಿತಿ ನೀಡಿ ವ್ಯಕ್ತಿಯೊರ್ವರ ಖಾತೆಯನ್ನು ನಿಯಂತ್ರಣಕ್ಕೆ ಪಡೆದು ಕೋಟ್ಯಾಂತರ ರೂ. ವ್ಯವಹಾರ ನಡೆಸಿ ವಂಚಿಸಿದ ಬಗ್ಗೆ ಸಂತ್ರಸ್ತರು ನೀಡಿದ ದೂರಿನಂತೆ ಉಡುಪಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಹೆಜಮಾಡಿ ಶಿವ ನಗರ ನಿವಾಸಿ ಸಂದಿ ಯಾನೇ ಸಂದೇಶ್ ಶೆಟ್ಟಿ, ವಿಶಾಲ್ ಬಂಗೇರ ಹಾಗೂ ಕೋಲ್ಕತ್ತದ ರೋಹನ್ ಡೇ. ಈ ಆರೋಪಿಗಳ ವಂಚನೆಗೆ ಒಳಗಾದವರು ಭದ್ರಾವತಿಯ ಕೂಡ್ಲಿಗೆರೆಯ ರುಮಾನ್ ಎನ್, ಇವರು ಉಡುಪಿಯ ಮಲ್ಪೆಯಲ್ಲಿ ಎ.ಎಂ.ಎಫ್. ಫಿಶ್ ಕಂಪನಿಯಲ್ಲಿ ಫಿಶ್ ಲೋಡಿಂಗ್ ಕೆಲಸವನ್ನು ಮಾಡಿಕೊಂಡಿದ್ದ ವೇಳೆ ಸಂಸ್ಥೆಯ ಮ್ಯಾನೇಜರ್ ಮಂಜೇಶ್ ಬಂಗೇರ ಮೂಲಕ ಹೆಜಮಾಡಿಯ ಸಂದೇಶ್ ಶೆಟ್ಟಿ ಮತ್ತು ವಿಶಾಲ್ ಎಂಬವರ ಪರಿಚಯವಾಗಿದ್ದು, ಆ ಸಂದರ್ಭ ತಮ್ಮ ಕೃತ್ಯಕ್ಕೆ ಮುಹೂರ್ತ ಇಟ್ಟಿ ಇವರು ನಾವು ಪ್ರತ್ಯೇಕ ಫಿಶ್ ಟ್ರಾನ್ಸ್ ಪೋರ್ಟ್ ಮಾಡುವವರಿದ್ದು, ಈ ವ್ಯವಹಾರಕ್ಕೆ ಬ್ಯಾಂಕ್ ಕರೆಂಟ್ ಅಕೌಂಟ್ ಗಳ ಅಗತ್ಯವಿದೆ ಎಂದು ತಿಳಿಸಿ, ಮ್ಯಾನೇಜರ್ ಮಂಜೇಶ್ ಬಂಗೇರ ಇವರ ಮಲ್ಪೆ ವಂಢಭಾಂಡೇಶ್ವರದ ಮನೆಗೆ “ಎಸ್ ಬಿ” ಎಂಟರ್ ಪ್ರೈಸಸ್ ನಲ್ಲಿ ಫಿಶ್ ಟ್ರಾನ್ಸ್ ಪೋರ್ಟ್ ಎಂಬುದಾಗಿ ಬ್ಯಾನರ್ ಅಳವಡಿಸಿ ಈ ಮನೆ ನಮ್ಮ ಕಛೇರಿ ಎಂಬುದಾಗಿ ನಂಬಿಸಿ ರುಮಾನ್ ಹೆಸರಲ್ಲಿ ಉಡುಪಿಯ ವಿವಿಧ ಬ್ಯಾಂಕ್ ಗಳಲ್ಲಿ ಖಾತೆ ಮಾಡಿಸಿ, ಅದರ ಪಾಸ್ ಪುಸ್ತಕ, ಚೆಕ್ ಪುಸ್ತಕ ಹಾಗೂ ಗೂಗಲ್ ಫೇ ಸ್ಪೀಕರ್ ರನ್ನು ಸಂದೇಶ್ ಶೆಟ್ಟಿ ಪಡೆದುಕೊಂಡಿದ್ದು, ತದ ನಂತರ ಇನ್ನೊರ್ವ ಆರೋಪಿ ವಿಶಾಲ್ ರುಮಾನ್ ರವರನ್ನು ಕೋಲ್ಕತ್ತಾಕ್ಕೆ ಕರೆದುಕೊಂಡು ಹೋಗಿ ಅಲ್ಲಿ ರೋಹನ್ ಡೇ ಎಂಬಾತನೊಂದಿಗೆ ಸೇರಿಕೊಂಡು, ನಾಲ್ಕು ದಿನ ಬೇರೆ ಬೇರೆ ಲಾಡ್ಜ್ ಗಳ ಕೊಠಡಿಗಳಲ್ಲಿ ಇದ್ದು, ರುಮಾನ್ ರವರ ಮೊಬೈಲ್ ಗೆ ಬರುವ ಒಟಿಪಿ ಗಳನ್ನು ಪಡೆಯುವುದಲ್ಲದೆ, ಆರೋಪಿಗಳು ತಮ್ಮ ಮೊಬೈಲ್ ಗೆ ಬರುತ್ತಿದ್ದ ವಿಡಿಯೋ ಕಾಲ್ ಗಳಿಗೆ ರುಮಾನ್ ಮುಖವನ್ನು ತೋರಿಸಿ ಅವರು ಮಾತನಾಡಿಸುತ್ತಿದ್ದರು, ಈ ಮಧ್ಯೆ ರುಮಾನ್ ತಾನು ಊರಿಗೆ ಹೋಗ ಬೇಕು ಹಣ ಬೇಕು ಎಂದಾಗ ಆರೋಪಿಗಳು ಹಲ್ಲೆ ನಡೆಸಿದ್ದಲ್ಲದೆ ನಾವು ಹೇಳಿದಾಗೆ ನೀನು ಕೇಳದಿದ್ದರೆ ನಿನಗೆ ಗತಿ ಕಾಣಿಸುತ್ತೇವೆ ಎಂದು ಬೆದರಿಕೆಯೊಡ್ಡಿದ್ದರು.

ಇದನ್ನೂ ಓದಿ:

ಊರಿಗೆ ಬಂದ ಬಳಿಕ ಸಂಶಯಗೊಂಡ ರುಮಾನ್ ತನ್ನಲ್ಲಿ ಖಾತೆ ಮಾಡಿಕೊಂಡಿದ್ದ ಬ್ಯಾಂಕ್ ಗಳಿಗೆ ಕರೆ ಮಾಡಿ ವಿಚಾರಿಸಿದಾಗ ತನ್ನ ಕರೆಂಟ್ ಖಾತೆಯಲ್ಲಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಆಗಿರುವುದು ತಿಳಿದಿದೆ, ಆರೋಪಿಗಳಾದ ಹೆಜಮಾಡಿ ಸಂದೇಶ್ ಶೆಟ್ಟಿ, ವಿಶಾಲ್ ಹಾಗೂ ರೋಹನ್ ಇವರುಗಳು ಘೋರವಾದ ಆರ್ಥಿಕ ಅಪರಾಧ ನಡೆಸಲು ದೂರುದಾರ ರುಮಾನ್ ರವರನ್ನು ನಂಬಿಸಿ, “ಎಸ್ ಬಿ” ಎಂಟರ್ ಪ್ರೈಸಸ್ ಎಂಬ ಸಂಸ್ಥೆಯ ಹೆಸರಲ್ಲಿ ಬ್ಯಾಂಕಿನ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡುವಂತೆ ಉತ್ತೇಜಿಸಿ ರುಮಾನ್ ಕರೆಂಟ್ ಖಾತೆಯನ್ನು ತಮ್ಮ ನಿಯಂತ್ರಣಕ್ಕೆ ಪಡೆದು, ಆ ಮೂಲಕ ಅಪರಿಚಿತರಿಗೆ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿ, ವಂಚಿಸಿದ ಹಣವನ್ನು ರುಮಾನ್ ಹೆಸರಲ್ಲಿರುವ ಎಸ್ ಬಿ ಎಂಟರ್ ಪ್ರೈಸಸ್ ಕರೆಂಟ್ ಖಾತೆಯಲ್ಲಿ ವರ್ಗಾವಣೆ ಮಾಡಿ ಖಾತೆಯನ್ನು ದುರುಪಯೋಗ ಪಡಿಸಿ ವಂಚಿಸಿ ದ್ರೋಹ ಎಸಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಡುಪಿ ಸೈಬರ್ ಕ್ರೈಮ್ ಅಧಿಕಾರಿಗಳು ಪ್ರಮುಖ ಆರೋಪಿ ಹೆಜಮಾಡಿ ಸಂದೇಶ್ ಶೆಟ್ಟಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago