Featured

ಪಡುಬಿದ್ರಿ : ಕೋಳಿ ಜಗಳ ; ಕುಟುಂಬಗಳ ಮಧ್ಯೆ ದೊಣ್ಣೆಯಿಂದ ಬಡಿದಾಟ -Vishwanews24

ಪಡುಬಿದ್ರಿ : ಕೋಳಿ ಜಗಳ ; ಕುಟುಂಬಗಳ ಮಧ್ಯೆ ದೊಣ್ಣೆಯಿಂದ ಬಡಿದಾಟ -Vishwanews24

ಉಡುಪಿ: ಪಕ್ಕದ ಮನೆ ಕೋಳಿ ತಮ್ಮ ಮನೆ ಮುಂದೆ ಬಂತೆಂಬ ಕ್ಷುಲ್ಲಕ ಕಾರಣಕ್ಕೆ ಬಡಿಗೆಯಿಂದ ಪರಸ್ಪರ ಬಡಿದಾಡಿದ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆ ಸಮೀಪದ ಉಳ್ಳೂರು ಗ್ರಾಮದಲ್ಲಿ ಗಲಾಟೆ ನಡೆದಿದೆ. ರವಿರಾಜ್ ಶೆಟ್ಟಿ ಎಂಬಾತ ದೊಣ್ಣೆ ತೆಗೆದುಕೊಂಡು ವಾರಿಜಾ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದಾನೆ. ರವಿರಾಜ್ ಮನೆಯ ಕೋಳಿ ವಾರಿಜಾ ಅವರ ಅಂಗಳಕ್ಕೆ ಹೋಗಿದೆ. ಅದನ್ನು ವಾರಿಜ ಓಡಿಸಿದ್ದಾರೆ. ಅಲ್ಲದೆ ಕೋಳಿ ಪದೇಪದೇ ಬರುತ್ತದೆ ಎಂದು ವಾರಿಜಾ ಬೈದಿದ್ದಾರೆ. ಇದೇ ವಿಚಾರ ರಂಪಾಟಕ್ಕೆ ಕಾರಣವಾಗಿದೆ.

ಮಾತಿಗೆ ಮಾತು ಬೆಳೆದು ಜಗಳ ಮಿತಿ ಮೀರಿ ದೊಣ್ಣೆ ತೆಗೆದುಕೊಂಡು ಮಹಿಳೆಯರ ಮೇಲೆ ರವಿರಾಜ್ ಹಲ್ಲೆ ಮಾಡಿದ್ದಾನೆ. ಮಹಿಳೆಯರನ್ನು ಎಳೆದಾಡಿ ಅವಾಚ್ಯವಾಗಿ ಬೈದಿದ್ದಾನೆ. ಆತನಿಗೆ ಮಹಿಳೆಯೊಬ್ಬರು ಬೆಂಬಲ ನೀಡಿದ್ದು, ವಾರಿಜಾ ಅವರ ಬೆಂಬಲಕ್ಕೆ ಬಂದ ಮಹಿಳೆಯ ಮೇಲೂ ಹಲ್ಲೆಯಾಗಿದೆ.

ಈ ಕೋಳಿ ಜಗಳದ ಹಿಂದೆ ಹಳೆಯ ವೈಷಮ್ಯ ಜಮೀನಿನ ತಗಾದೆ ಇರಬಹುದು ಎನ್ನಲಾಗಿದೆ. ನಂತರ ಪಡುಬಿದ್ರಿ ಪೊಲೀಸರು ಎರಡೂ ಕುಟುಂಬದವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆದು, ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

5 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

9 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

10 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

10 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

11 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

11 hours ago