Featured

ಪಡುಬಿದ್ರಿ : ಕೋಳಿ ಜಗಳ ; ಕುಟುಂಬಗಳ ಮಧ್ಯೆ ದೊಣ್ಣೆಯಿಂದ ಬಡಿದಾಟ -Vishwanews24

ಪಡುಬಿದ್ರಿ : ಕೋಳಿ ಜಗಳ ; ಕುಟುಂಬಗಳ ಮಧ್ಯೆ ದೊಣ್ಣೆಯಿಂದ ಬಡಿದಾಟ -Vishwanews24

ಉಡುಪಿ: ಪಕ್ಕದ ಮನೆ ಕೋಳಿ ತಮ್ಮ ಮನೆ ಮುಂದೆ ಬಂತೆಂಬ ಕ್ಷುಲ್ಲಕ ಕಾರಣಕ್ಕೆ ಬಡಿಗೆಯಿಂದ ಪರಸ್ಪರ ಬಡಿದಾಡಿದ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆ ಸಮೀಪದ ಉಳ್ಳೂರು ಗ್ರಾಮದಲ್ಲಿ ಗಲಾಟೆ ನಡೆದಿದೆ. ರವಿರಾಜ್ ಶೆಟ್ಟಿ ಎಂಬಾತ ದೊಣ್ಣೆ ತೆಗೆದುಕೊಂಡು ವಾರಿಜಾ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದಾನೆ. ರವಿರಾಜ್ ಮನೆಯ ಕೋಳಿ ವಾರಿಜಾ ಅವರ ಅಂಗಳಕ್ಕೆ ಹೋಗಿದೆ. ಅದನ್ನು ವಾರಿಜ ಓಡಿಸಿದ್ದಾರೆ. ಅಲ್ಲದೆ ಕೋಳಿ ಪದೇಪದೇ ಬರುತ್ತದೆ ಎಂದು ವಾರಿಜಾ ಬೈದಿದ್ದಾರೆ. ಇದೇ ವಿಚಾರ ರಂಪಾಟಕ್ಕೆ ಕಾರಣವಾಗಿದೆ.

ಮಾತಿಗೆ ಮಾತು ಬೆಳೆದು ಜಗಳ ಮಿತಿ ಮೀರಿ ದೊಣ್ಣೆ ತೆಗೆದುಕೊಂಡು ಮಹಿಳೆಯರ ಮೇಲೆ ರವಿರಾಜ್ ಹಲ್ಲೆ ಮಾಡಿದ್ದಾನೆ. ಮಹಿಳೆಯರನ್ನು ಎಳೆದಾಡಿ ಅವಾಚ್ಯವಾಗಿ ಬೈದಿದ್ದಾನೆ. ಆತನಿಗೆ ಮಹಿಳೆಯೊಬ್ಬರು ಬೆಂಬಲ ನೀಡಿದ್ದು, ವಾರಿಜಾ ಅವರ ಬೆಂಬಲಕ್ಕೆ ಬಂದ ಮಹಿಳೆಯ ಮೇಲೂ ಹಲ್ಲೆಯಾಗಿದೆ.

ಈ ಕೋಳಿ ಜಗಳದ ಹಿಂದೆ ಹಳೆಯ ವೈಷಮ್ಯ ಜಮೀನಿನ ತಗಾದೆ ಇರಬಹುದು ಎನ್ನಲಾಗಿದೆ. ನಂತರ ಪಡುಬಿದ್ರಿ ಪೊಲೀಸರು ಎರಡೂ ಕುಟುಂಬದವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆದು, ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago