ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಕರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಕಾಪುವಿನ ಹೆಜಮಾಡಿ ಗ್ರಾಮದ ಅಮೀರ್ ಸುಹೈಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ನಿನ್ನೆ ಇವರ ದೂರದ ಸಂಬಂಧಿ ಹೆಜಮಾಡಿ ಗ್ರಾಮದ ಎನ್.ಎಸ್. ರಸ್ತೆಯ ನಿವಾಸಿ ಇಕ್ಬಾಲ್ ಎಂಬಾತನು ಕಬ್ಬಿಣದ ರಾಡ್, ಸ್ಕ್ರೂ ಡ್ರೈವರ್, ಮರದ ರೀಪ್ನ್ನು ಹಿಡಿದುಕೊಂಡು ಬಂದು ಏಕಾಏಕಿಯಾಗಿ ಪಿರ್ಯಾದಿದಾರರ ಮನೆಯ ಒಳಗೆ ಅಕ್ರಮವಾಗಿ ಬಂದು, ಅವಾಚ್ಯ ಶಬ್ಧಗಳಿಂದ ಬೈದು, ಆತನ ಕೈಯಲ್ಲಿದ್ದ ಕಬ್ಬಿಣದ ರಾಡಿನಿಂದ ಹೊಡೆಯಲು ಮುಂದಾಗಿದ್ದು, ಈ ವೇಳೆ ಅವರು ತಪ್ಪಿಸುವಾಗ ರಾಡ್ ತಲೆಗೆ ಕೈಗೆ ತಾಗಿದೆ. ಬಳಿಕ ಇಕ್ಬಾಲ್ನು ಅಮೀರ್ ಸುಹೈಲ್ ಅವರ ಅಣ್ಣ ಇಮ್ರಾನ್ನಿಗೆ ರೀಪಿನಿಂದ ಹೊಡೆದಿದ್ದು, ಈ ವೇಳೆಗೆ ಅಮೀರ್ ಅವರ ಅಣ್ಣ ರಮೀಝ್ ಬಂದಾಗ ಆರೋಪಿಯು ಅಲ್ಲಿಂದ ಓಡಿ ಹೋಗಿದ್ದನು. ಆದರೆ ಬಳಿಕ ಆತನ ತಮ್ಮ ನೌಫಲ್, ಅಜರ್, ಅಣ್ಣ ಇಬ್ರಾಹಿಂ, ಮನ್ಸೂರ್, ಮತ್ತಿತರರೊಂದಿಗೆ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಮನೆಯ ಬಳಿ ಬಂದು ಬೆದರಿಕೆ ಹಾಕಿ, ಕಲ್ಲು ಬಿಸಾಡಿ ಹೋಗಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…