Featured

ಪಡುಬಿದ್ರಿ : ಕ್ಷುಲ್ಲಕ ಕಾರಣಕ್ಕೆ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ – ದೂರು ದಾಖಲು – Vishwanews24

ಪಡುಬಿದ್ರಿ : ಕ್ಷುಲ್ಲಕ ಕಾರಣಕ್ಕೆ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ – ದೂರು ದಾಖಲು

ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಕರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಕಾಪುವಿನ ಹೆಜಮಾಡಿ ಗ್ರಾಮದ ಅಮೀರ್ ಸುಹೈಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ನಿನ್ನೆ ಇವರ ದೂರದ ಸಂಬಂಧಿ ಹೆಜಮಾಡಿ ಗ್ರಾಮದ ಎನ್.ಎಸ್. ರಸ್ತೆಯ ನಿವಾಸಿ ಇಕ್ಬಾಲ್ ಎಂಬಾತನು ಕಬ್ಬಿಣದ ರಾಡ್, ಸ್ಕ್ರೂ ಡ್ರೈವರ್, ಮರದ ರೀಪ್‍ನ್ನು ಹಿಡಿದುಕೊಂಡು ಬಂದು ಏಕಾಏಕಿಯಾಗಿ ಪಿರ್ಯಾದಿದಾರರ ಮನೆಯ ಒಳಗೆ ಅಕ್ರಮವಾಗಿ ಬಂದು, ಅವಾಚ್ಯ ಶಬ್ಧಗಳಿಂದ ಬೈದು, ಆತನ ಕೈಯಲ್ಲಿದ್ದ ಕಬ್ಬಿಣದ ರಾಡಿನಿಂದ ಹೊಡೆಯಲು ಮುಂದಾಗಿದ್ದು, ಈ ವೇಳೆ ಅವರು ತಪ್ಪಿಸುವಾಗ ರಾಡ್ ತಲೆಗೆ ಕೈಗೆ ತಾಗಿದೆ. ಬಳಿಕ ಇಕ್ಬಾಲ್‍ನು ಅಮೀರ್ ಸುಹೈಲ್ ಅವರ ಅಣ್ಣ ಇಮ್ರಾನ್‍ನಿಗೆ ರೀಪಿನಿಂದ ಹೊಡೆದಿದ್ದು, ಈ ವೇಳೆಗೆ ಅಮೀರ್ ಅವರ ಅಣ್ಣ ರಮೀಝ್ ಬಂದಾಗ ಆರೋಪಿಯು ಅಲ್ಲಿಂದ ಓಡಿ ಹೋಗಿದ್ದನು. ಆದರೆ ಬಳಿಕ ಆತನ ತಮ್ಮ ನೌಫಲ್, ಅಜರ್, ಅಣ್ಣ ಇಬ್ರಾಹಿಂ, ಮನ್ಸೂರ್, ಮತ್ತಿತರರೊಂದಿಗೆ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಮನೆಯ ಬಳಿ ಬಂದು ಬೆದರಿಕೆ ಹಾಕಿ, ಕಲ್ಲು ಬಿಸಾಡಿ ಹೋಗಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago