ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಕರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಕಾಪುವಿನ ಹೆಜಮಾಡಿ ಗ್ರಾಮದ ಅಮೀರ್ ಸುಹೈಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ನಿನ್ನೆ ಇವರ ದೂರದ ಸಂಬಂಧಿ ಹೆಜಮಾಡಿ ಗ್ರಾಮದ ಎನ್.ಎಸ್. ರಸ್ತೆಯ ನಿವಾಸಿ ಇಕ್ಬಾಲ್ ಎಂಬಾತನು ಕಬ್ಬಿಣದ ರಾಡ್, ಸ್ಕ್ರೂ ಡ್ರೈವರ್, ಮರದ ರೀಪ್ನ್ನು ಹಿಡಿದುಕೊಂಡು ಬಂದು ಏಕಾಏಕಿಯಾಗಿ ಪಿರ್ಯಾದಿದಾರರ ಮನೆಯ ಒಳಗೆ ಅಕ್ರಮವಾಗಿ ಬಂದು, ಅವಾಚ್ಯ ಶಬ್ಧಗಳಿಂದ ಬೈದು, ಆತನ ಕೈಯಲ್ಲಿದ್ದ ಕಬ್ಬಿಣದ ರಾಡಿನಿಂದ ಹೊಡೆಯಲು ಮುಂದಾಗಿದ್ದು, ಈ ವೇಳೆ ಅವರು ತಪ್ಪಿಸುವಾಗ ರಾಡ್ ತಲೆಗೆ ಕೈಗೆ ತಾಗಿದೆ. ಬಳಿಕ ಇಕ್ಬಾಲ್ನು ಅಮೀರ್ ಸುಹೈಲ್ ಅವರ ಅಣ್ಣ ಇಮ್ರಾನ್ನಿಗೆ ರೀಪಿನಿಂದ ಹೊಡೆದಿದ್ದು, ಈ ವೇಳೆಗೆ ಅಮೀರ್ ಅವರ ಅಣ್ಣ ರಮೀಝ್ ಬಂದಾಗ ಆರೋಪಿಯು ಅಲ್ಲಿಂದ ಓಡಿ ಹೋಗಿದ್ದನು. ಆದರೆ ಬಳಿಕ ಆತನ ತಮ್ಮ ನೌಫಲ್, ಅಜರ್, ಅಣ್ಣ ಇಬ್ರಾಹಿಂ, ಮನ್ಸೂರ್, ಮತ್ತಿತರರೊಂದಿಗೆ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಮನೆಯ ಬಳಿ ಬಂದು ಬೆದರಿಕೆ ಹಾಕಿ, ಕಲ್ಲು ಬಿಸಾಡಿ ಹೋಗಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…