Categories: ಉಡುಪಿ

ಪಡುಬಿದ್ರಿ: ಕ್ಷುಲ್ಲಕ ಕಾರಣ – ವ್ಯಕ್ತಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ – ದೂರು ದಾಖಲು – Vishwanews24

ಪಡುಬಿದ್ರಿ: ಕ್ಷುಲ್ಲಕ ಕಾರಣ – ವ್ಯಕ್ತಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ – ದೂರು ದಾಖಲು

ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಗೋವಿಂದ ರಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಇವರು ಮಾ.2 ರಂದು ಕಾಪುವಿನ ನಂದಿಕೂರು ಗ್ರಾಮದ ಕೈಗಾರಿಕಾ ಪ್ರದೇಶದ ಶ್ರೀ ಚಕ್ರ ಇಂಡಸ್ಟ್ರಿ ಬಳಿ ಗಾರೆ ಕೆಲಸ ಮಾಡುತ್ತಿರುವಾಗ ಐವಾನ್ ಡಿಸೋಜ ರವರು ಪೋನ್ ಮಾಡಿ ಗ್ಯಾರೇಜಿಗೆ ಬರಲು ತಿಳಿಸಿದ್ದರು. ಅದರಂತೆ ಮಧ್ಯಾಹ್ನದ ವೇಳೆ ಕೈಗಾರಿಕಾ ಪ್ರದೇಶದಿಂದ ಹೋಗುತ್ತಿರುವಾಗ ನಿಟ್ಟೆಯ ಫಾರೂಕ್ ಹಾಗೂ ಆತನ ರೈಟರ್ ಅಲ್ಲಿಗೆ ಬಂದು ಇವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ನೆಲಕ್ಕೆ ದೂಡಿ ಬೀಳಿಸಿ, ತುಳಿದು, ಕಲ್ಲಿನಲ್ಲಿ ಹೊಡೆದು ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಚೂರಿಯನ್ನು ತೋರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಹಾಗೂ ಹಲ್ಲೆಯಿಂದ ಕೈಗೆ ತರಚಿದ ಗಾಯವಾಗಿದ್ದು, ಈ ಬಗ್ಗೆ ಕಾರ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿದೆ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

2 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

3 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

4 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

6 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

6 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

7 hours ago