ಪಡುಬಿದ್ರಿ: ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ.
ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಮೀನು ಹಾಗೂ ಮೀನಿನ ಹೊಟೇಲ್ ವ್ಯವಹಾರ ಮಾಡಿಕೊಳ್ಳುತ್ತಿದ್ದ ಬೋಳಾರದ ಮಮತಾ ಅವರನ್ನು 2011ರಲ್ಲಿ ಪಡುಬಿದ್ರಿ ಬೀಡು ನಿವಾಸಿ ಚೇತನ್ ಮದುವೆಯಾಗಿದ್ದು, ಚೇತನ್ ಆಗಾಗ್ಗೆ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಮಮತಾ ಮಂಗಳೂರಿನಲ್ಲಿರುವ ಅಣ್ಣ ಗಿರೀಶ್ ಸುವರ್ಣ ಅವರಿಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದರು. ತಾನು ಹಣ ಕದ್ದಿರುವುದಾಗಿ ಆಪಾದನೆ ಹೊರಿಸಿ ತನಗೆ ಪತಿ ಚೇತನ್ ನೀಡಿದ್ದಾಗಿ ಆಕೆ ದೂರಿಕೊಂಡಿದ್ದಳು. ಆಕೆಯನ್ನು ತಾನು ಸಮಾಧಾನಪಡಿಸಿದ್ದೆ ಎಂದು ಗಿರೀಶ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಮಮತಾ ತನ್ನ ತಾಯಿ, ಅಣ್ಣ ಹಾಗೂ ಅಕ್ಕ ಭಾರತಿಗೂ ಗಂಡನ ಮನೆಯಲ್ಲಿ ತಾನು ಅನುಭವಿಸುತ್ತಿದ್ದ ಹಿಂಸೆಯ ಬಗ್ಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಳು.
ಚಿತ್ರಹಿಂಸೆಯಿಂದಲೇ ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿರುದ್ಧ ಕ್ರಮ ಜರಗಿಸುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…