Featured

ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ : ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ – Vishwanews24

ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ : ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ

ಪಡುಬಿದ್ರಿ: ಪತಿಯ ಮಾನಸಿಕ, ದೈಹಿಕ ಹಿಂಸೆಯಿಂದಾಗಿ ಸಂಶಯಾಸ್ಪದ ಸಾವಿಗೀಡಾದ ಮಮತಾ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಆಕೆಯ ಪತಿ, ಬೀಡು ನಿವಾಸಿ ಚೇತನ್‌ ಕುಮಾರ್‌ ಕೆ. (42)ನನ್ನು ಫೆ. 23ರಂದು ರಾತ್ರಿ ಪಡುಬಿದ್ರಿ ಬೀಚ್‌ ಬಳಿಯಲ್ಲಿ ಬಂಧಿಸಲಾಗಿದೆ.

ಆತನನ್ನು ಉಡುಪಿಯ ನ್ಯಾಯಾಲಯಕ್ಕೆ ಪಡುಬಿದ್ರಿ ಪೊಲೀಸರು ಶುಕ್ರವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಪಡುಬಿದ್ರಿ ಬೀಡು ಬಳಿಯ ನಿವಾಸಿ ಚೇತನ್‌ನನ್ನು 2011ರಲ್ಲಿ ವಿವಾಹವಾಗಿದ್ದ ಮಮತಾ ಅವರಿಗೆ ಪತಿ ಸತತವಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ನೀಡುತ್ತಿದ್ದ. ಈ ಕುರಿತಾಗಿ ಆಕೆ ತಮ್ಮ ತಾಯಿ, ಅಕ್ಕ ಹಾಗೂ ಅಣ್ಣನವರಲ್ಲಿ ಹೇಳಿಕೊಳ್ಳುತ್ತಿದ್ದಳು. ಗುರುವಾರ ಕೂಡಾ ಚೇತನ್‌, ತನ್ನ ಪತ್ನಿ ಮಮತಾ ಹಣ ಕದ್ದಿರುವುದಾಗಿ ಆಪಾದನೆಗಳನ್ನು ಹೊರಿಸಿ ಆಕೆಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದನ್ನು ಬೆಳಗ್ಗೆಯೇ ಅಣ್ಣನವರಿಗೆ ಮೊಬೈಲ್‌ ಕರೆ ಮಾಡಿ ಮಮತಾ ಹೇಳಿಕೊಂಡಿದ್ದರು. ಸಂಜೆಯ ವೇಳೆಗೆ ಅಡುಗೆ ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಬಗ್ಗೆ ಮೃತ ಮಮತಾ ಅವರ ಸಹೋದರ ನೀಡಿದ ಸಂಶಯಾಸ್ಪದ ಸಾವಿನ ದೂರಿನಂತೆ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿ ಮಮತಾ ಪತಿ ಚೇತನ್‌ ಕುಮಾರ್‌ನನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago