Featured

ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ : ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ – Vishwanews24

ಪಡುಬಿದ್ರಿ: ಗೃಹಿಣಿ ಸಂಶಯಾಸ್ಪದ ಸಾವಿನ ಪ್ರಕರಣ : ಪತಿ ಸೆರೆ, 15 ದಿನ ನ್ಯಾಯಾಂಗ ಬಂಧನ

ಪಡುಬಿದ್ರಿ: ಪತಿಯ ಮಾನಸಿಕ, ದೈಹಿಕ ಹಿಂಸೆಯಿಂದಾಗಿ ಸಂಶಯಾಸ್ಪದ ಸಾವಿಗೀಡಾದ ಮಮತಾ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಆಕೆಯ ಪತಿ, ಬೀಡು ನಿವಾಸಿ ಚೇತನ್‌ ಕುಮಾರ್‌ ಕೆ. (42)ನನ್ನು ಫೆ. 23ರಂದು ರಾತ್ರಿ ಪಡುಬಿದ್ರಿ ಬೀಚ್‌ ಬಳಿಯಲ್ಲಿ ಬಂಧಿಸಲಾಗಿದೆ.

ಆತನನ್ನು ಉಡುಪಿಯ ನ್ಯಾಯಾಲಯಕ್ಕೆ ಪಡುಬಿದ್ರಿ ಪೊಲೀಸರು ಶುಕ್ರವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಪಡುಬಿದ್ರಿ ಬೀಡು ಬಳಿಯ ನಿವಾಸಿ ಚೇತನ್‌ನನ್ನು 2011ರಲ್ಲಿ ವಿವಾಹವಾಗಿದ್ದ ಮಮತಾ ಅವರಿಗೆ ಪತಿ ಸತತವಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ನೀಡುತ್ತಿದ್ದ. ಈ ಕುರಿತಾಗಿ ಆಕೆ ತಮ್ಮ ತಾಯಿ, ಅಕ್ಕ ಹಾಗೂ ಅಣ್ಣನವರಲ್ಲಿ ಹೇಳಿಕೊಳ್ಳುತ್ತಿದ್ದಳು. ಗುರುವಾರ ಕೂಡಾ ಚೇತನ್‌, ತನ್ನ ಪತ್ನಿ ಮಮತಾ ಹಣ ಕದ್ದಿರುವುದಾಗಿ ಆಪಾದನೆಗಳನ್ನು ಹೊರಿಸಿ ಆಕೆಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದನ್ನು ಬೆಳಗ್ಗೆಯೇ ಅಣ್ಣನವರಿಗೆ ಮೊಬೈಲ್‌ ಕರೆ ಮಾಡಿ ಮಮತಾ ಹೇಳಿಕೊಂಡಿದ್ದರು. ಸಂಜೆಯ ವೇಳೆಗೆ ಅಡುಗೆ ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಬಗ್ಗೆ ಮೃತ ಮಮತಾ ಅವರ ಸಹೋದರ ನೀಡಿದ ಸಂಶಯಾಸ್ಪದ ಸಾವಿನ ದೂರಿನಂತೆ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿ ಮಮತಾ ಪತಿ ಚೇತನ್‌ ಕುಮಾರ್‌ನನ್ನು ಬಂಧಿಸಿದ್ದಾರೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

7 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

8 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago