Featured

ಪಡುಬಿದ್ರಿ: ಟಿಪ್ಪರ್‌‌ನ ಹಿಂಬದಿಗೆ ಸಿಲುಕಿದ ಕಾರು – ಕಿಲೋಮೀಟರ್ ದೂರ  ಕಾರನ್ನು ಎಳೆದೊಯ್ದ ಟಿಪ್ಪರ್ ..Vishwanews24

ಪಡುಬಿದ್ರಿ: ಟಿಪ್ಪರ್‌‌ನ ಹಿಂಬದಿಗೆ ಸಿಲುಕಿದ ಕಾರು ..

ಕಿಲೋಮೀಟರ್ ದೂರ  ಕಾರನ್ನು ಎಳೆದೊಯ್ದ ಟಿಪ್ಪರ್ ..

ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ..

ಪಡುಬಿದ್ರಿ: ಟಿಪ್ಪರ್‌‌ನ ಡಂಪರ್‌‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗುತ್ತಿದ್ದಂತೆ ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದು, ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ.

ಇನ್ನು ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ಸಾರ್ವಜನಿಕರು ನಿಲ್ಲಿಸಿದ್ದು, ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಗಳನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಇನ್ನು ಗಾಯಾಳುಗಳಿಂದ ಮಾಹಿತಿ ಪಡೆದಿರುವ ಪೊಲೀಸರು ಕೇಸು ದಾಖಲಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

49 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

55 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago