Featured

ಪಡುಬಿದ್ರಿ: ಟೈಮಿಂಗ್  ವಾಗ್ವಾದ: ಬಸ್ಸನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿದ ಚಾಲಕ ; ದೂರು ದಾಖಲು – Vishwanews24

ಪಡುಬಿದ್ರಿ: ಟೈಮಿಂಗ್  ವಾಗ್ವಾದ: ಬಸ್ಸನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿದ ಚಾಲಕ  -ದೂರು ದಾಖಲು

ಪಡುಬಿದ್ರಿ : ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಬಸ್ ಚಾಲಕ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದ ವಿಲಕ್ಷಣ ಘಟನೆ ಗುರುವಾರ ಪಡುಬಿದ್ರಿಯಲ್ಲಿ ನಡೆದಿದೆ.

ಟೈಂ ಕೀಪರ್ ಶರತ್ ಹಾಗೂ ಉಡುಪಿ – ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿ ಅಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದಿದ್ದಾನೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.

ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯ ಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಇತರ ವಾಹನ ಸವಾರರು ಚಾಲಕನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

23 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago