ಪಡುಬಿದ್ರಿ : ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಬಸ್ ಚಾಲಕ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದ ವಿಲಕ್ಷಣ ಘಟನೆ ಗುರುವಾರ ಪಡುಬಿದ್ರಿಯಲ್ಲಿ ನಡೆದಿದೆ.
ಟೈಂ ಕೀಪರ್ ಶರತ್ ಹಾಗೂ ಉಡುಪಿ – ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿ ಅಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ವಿಶ್ರಾಂತಿ ಪಡೆದಿದ್ದಾನೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯ ಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಇತರ ವಾಹನ ಸವಾರರು ಚಾಲಕನ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…