ಪಡುಬಿದ್ರಿ ಟೋಲ್ ವಿರುದ್ಧ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ನೂರಾರು ಸಂಖ್ಯೆಯಲ್ಲಿ ಭಾಗಿಯಾದ ಕಾರ್ಯಕರ್ತರು – vishwanews24
ಪಡುಬಿದ್ರಿ ಟೋಲ್ ವಿರುದ್ಧ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ನೂರಾರು ಸಂಖ್ಯೆಯಲ್ಲಿ ಭಾಗಿಯಾದ ಕಾರ್ಯಕರ್ತರು
ಪಡುಬಿದ್ರಿ: ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿ ಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಗೆ ನೂರಾರು ಕಾರ್ಯಕರ್ತರು ಸೇರಿಕೊಂಡಿದ್ದಾರೆ.

ಖುದ್ದಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಬೀದಿಗಿಳಿದಿದ್ದು ಟೋಲ್ ರದ್ದತಿಗಾಗಿ ಪಣತೊಟ್ಟಿದ್ದಾರೆ ಇದಕ್ಕೆ ಜತೆಯಾಗಿ ಸಾರ್ವಜನಿಕರು ಸೇರಿದಂತೆ ಪಾರ್ಟಿಯ ಕಾರ್ಯಕರ್ತರು ಟೋಲ್ ಕಂಪನಿ ವಿರುದ್ಧ ದಿಕ್ಕಾರ ಕೂಗುತ್ತಿದ್ದಾರೆ.
ಬೆಳ್ತಂಗಡಿ: ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ – vishwanews24
