ಪಡುಬಿದ್ರಿ: ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್ ಪ್ಲಾಝಾದಲ್ಲಿ ಹೆದ್ದಾರಿ ಟೋಲ್ ಪಾವತಿಸದೇ ತನ್ನ ಕಾರನ್ನು ನುಗ್ಗಿಸಿದ್ದರೂ ಕಾರನ್ನು ತಡೆದ ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ ಕಾರು ಮಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆ. 6ರಂದು ಪ್ರಕರಣ ದಾಖಲಾಗಿದೆ.
ಬಂಟ್ವಾಳ ಮೂಲದ ಸಲೀಂ ಸುಂಕ ಪಾವತಿಸದೇ ತನ್ನ ಕೆಂಪು ಬಣ್ಣದ ಕಾರನ್ನು ಟೋಲ್ ಗೇಟಲ್ಲಿ ಬೆಳಿಗ್ಗಿನ 9-20ರ ಸುಮಾರಿಗೆ ನುಗ್ಗಿಸಿದ್ದ. ಅದನ್ನು ತಡೆದು ನಿಲ್ಲಿಸಿದ್ದ ಟೋಲ್ ಸಿಬ್ಬಂದಿ ಮೇಲೆ ಕಾರನ್ನು ಅಪಾಯಕಾರಿಯಾಗಿ ಚಲಾಯಿಸಿ ಮುಂದಕ್ಕೊಯ್ದು ನಿಲ್ಲಿಸಿ ಹಿಂದೆ ಮರಳಿ ಬಂದ ಆರೋಪಿಯು ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಕೈಯಿಂದ ಹಾಗೂ ಕೊಡೆಯಿಂದ ಹಲ್ಲೆ ನಡೆಸಿ, ಬೆದರಿಸಿದ ವೀಡಿಯೋ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತಾದ ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ಆರೋಪಿಯ ಜಾಡು ಹಿಡಿದು ಉಡುಪಿಯತ್ತ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…