ಪಡುಬಿದ್ರಿ: ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್ ಪ್ಲಾಝಾದಲ್ಲಿ ಹೆದ್ದಾರಿ ಟೋಲ್ ಪಾವತಿಸದೇ ತನ್ನ ಕಾರನ್ನು ನುಗ್ಗಿಸಿದ್ದರೂ ಕಾರನ್ನು ತಡೆದ ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ ಕಾರು ಮಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆ. 6ರಂದು ಪ್ರಕರಣ ದಾಖಲಾಗಿದೆ.
ಬಂಟ್ವಾಳ ಮೂಲದ ಸಲೀಂ ಸುಂಕ ಪಾವತಿಸದೇ ತನ್ನ ಕೆಂಪು ಬಣ್ಣದ ಕಾರನ್ನು ಟೋಲ್ ಗೇಟಲ್ಲಿ ಬೆಳಿಗ್ಗಿನ 9-20ರ ಸುಮಾರಿಗೆ ನುಗ್ಗಿಸಿದ್ದ. ಅದನ್ನು ತಡೆದು ನಿಲ್ಲಿಸಿದ್ದ ಟೋಲ್ ಸಿಬ್ಬಂದಿ ಮೇಲೆ ಕಾರನ್ನು ಅಪಾಯಕಾರಿಯಾಗಿ ಚಲಾಯಿಸಿ ಮುಂದಕ್ಕೊಯ್ದು ನಿಲ್ಲಿಸಿ ಹಿಂದೆ ಮರಳಿ ಬಂದ ಆರೋಪಿಯು ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಕೈಯಿಂದ ಹಾಗೂ ಕೊಡೆಯಿಂದ ಹಲ್ಲೆ ನಡೆಸಿ, ಬೆದರಿಸಿದ ವೀಡಿಯೋ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತಾದ ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ಆರೋಪಿಯ ಜಾಡು ಹಿಡಿದು ಉಡುಪಿಯತ್ತ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…