Featured

ಪಡುಬಿದ್ರಿ : ತಂದೆಯಿಂದಲೇ ಮಗಳ ಖಾಸಗಿ ವೀಡಿಯೋ  ವೈರಲ್‌ ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ – vishwanews24

ಪಡುಬಿದ್ರಿ : ತಂದೆಯಿಂದಲೇ ಮಗಳ ಖಾಸಗಿ ವೀಡಿಯೋ  ವೈರಲ್‌ ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಪದ್ಬಾಂಧವ ಆಸಿಫ್‌ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್‌ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್‌ ಗ್ರೋಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್‌ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್‌ಗೆ ಇಷ್ಟವಿರಲಿಲ್ಲ.ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್‌ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್‌ ಗ್ರೂಪ್‌ಗಳು ಸೇರಿ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

6 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

11 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago