Featured

ಪಡುಬಿದ್ರಿ : ತಂದೆಯಿಂದಲೇ ಮಗಳ ಖಾಸಗಿ ವೀಡಿಯೋ  ವೈರಲ್‌ ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ – vishwanews24

ಪಡುಬಿದ್ರಿ : ತಂದೆಯಿಂದಲೇ ಮಗಳ ಖಾಸಗಿ ವೀಡಿಯೋ  ವೈರಲ್‌ ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಪದ್ಬಾಂಧವ ಆಸಿಫ್‌ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್‌ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್‌ ಗ್ರೋಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್‌ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್‌ಗೆ ಇಷ್ಟವಿರಲಿಲ್ಲ.ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್‌ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್‌ ಗ್ರೂಪ್‌ಗಳು ಸೇರಿ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

13 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago