ಪಡುಬಿದ್ರಿ: ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ವಶಕ್ಕೆ ಪಡೆಯಲಾಗಿದ್ದು , ಉಳಿದಂತೆ ತಲೆ ಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಇವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.
ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು ಮಂದಿ ಸ್ನೇಹಿತರು ತಲವಾರ್ ನ್ನು ಬಳಸಿ ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟು ಹಬ್ಬ ಆಚರಿಸಿದ್ದು, ಈ ವಿಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಇದು ಪೊಲೀಸ್ ಇಲಾಖೆಗೆ ತಿಳಿದು ಇದೀಗ 7 ಮಂದಿಗೆ ಸಂಕಷ್ಟ ತಂದೊಡ್ಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…