ಪಡುಬಿದ್ರಿ: ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ವಶಕ್ಕೆ ಪಡೆಯಲಾಗಿದ್ದು , ಉಳಿದಂತೆ ತಲೆ ಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಇವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.
ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು ಮಂದಿ ಸ್ನೇಹಿತರು ತಲವಾರ್ ನ್ನು ಬಳಸಿ ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟು ಹಬ್ಬ ಆಚರಿಸಿದ್ದು, ಈ ವಿಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಇದು ಪೊಲೀಸ್ ಇಲಾಖೆಗೆ ತಿಳಿದು ಇದೀಗ 7 ಮಂದಿಗೆ ಸಂಕಷ್ಟ ತಂದೊಡ್ಡಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…