Featured

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಎರಡು ಬೃಹತ್ ಗಾತ್ರದ ವೀರಗಲ್ಲು – Vishwanews24

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಕಾಣಸಿಗುವ ಎರಡು ಬೃಹತ್ ಗಾತ್ರದ ವೀರಗಲ್ಲು

ಪಡುಬಿದ್ರಿ : ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರುವಿನಿಂದ ಮುಂದೆ ಸಾಗಿ  ಕೆಲ್ಲಾರು ಪಲಿಮಾರುವಿನ ಅಸ್ತಪಡ್ವೆ ಎಂಬಲ್ಲಿ ಆಟದ ಮೈದಾನದ ಬಳಿ ಆಲದ ಮರದ ಕೆಳಗಡೆ ಎರಡು ಬೃಹತ್ ಗಾತ್ರದ ವೀರಗಲ್ಲು ಕಾಣಸಿಗುತ್ತದೆ.
ಸುಮಾರು ಒಂದು ಏಳು ಫೀಟು. ಮತ್ತೊಂದು ಎಂಟು ಫೀಟು ಎತ್ತರದ ಎರಡು ಫೀಟು ಆಗಲ ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆ ಎಂಬಂತೆ. ಉಬ್ಬಿಕೊಂಡ ಚಿತ್ರ  ಕಾಣಸಿಗುತ್ತದೆ. ತಲೆಬಾಗದಲ್ಲಿ ಸೂರ್ಯ ಚಂದ್ರ. ಕತ್ತಿ ಗುರಾಣಿ. ಸೂಡಿ ಹಾಕಿದಂತೆ ತಲೆಯ ಭಾಗ. ವೀರರು ಬಳಸುವಂತಹ ಮೈ ಹೊದಿಕೆಯ ಬಟ್ಟೆ ಹೊಂದಿರುತ್ತದೆ. ಬಲಕಾಲು ಮುಂದೆ ನಿಂತು. ಗುರಾಣಿ ಕತ್ತಿ ಹಿಡಿದು ‌ ಯುದ್ಧಕ್ಕೆ ಆಹ್ವಾನಿಸಿದಂತಿದೆ.
ಪುರುಷನ ಚಿತ್ರ ಇರುವ ಶಾಸನ ದಲ್ಲಿ ಬಾಲದಂತಿದೆ.. ಈ ಭಾಗದ ಜನರು ಇದನ್ನು ಕೋಟಿ ಚೆನ್ನೇರು ಅನ್ನುತ್ತಾರೆ. ಅನತಿ ದೂರದಲ್ಲಿ ದೈವರಾಜ ಕೊಡ್ದಬ್ಬುವಿನ ಸನ್ನಿಧಾನವಿದೆ.  ಪ್ರಮುಖ ರಸ್ತೆಯಲ್ಲಿ ಕೋಟಿ ಚೆನ್ನಯರ ಗರಡಿಯೂ ಇದೆ. ಈ ಶಾಸನಗಳು ಸರಕಾರಿ ಜಾಗದಲ್ಲಿ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗೋಳಿಮರದ (ಆಲದಮರ) ಕೆಳಗಡೆ ನಿರ್ಜನ ಪ್ರದೇಶವಾದ್ದರಿಂದ ಯಾರು ಇದರ ಕಡೆಗೆಹೋಗುವುದಿಲ್ಲ ಈಗಾಗಲೇ ಬೇಲಿ ಹಾಕಿದ್ದು. ಸ್ವಚ್ಛತೆ ಕಾಣುವುದಿಲ್ಲ. ಉಡುಪಿ ನಿಟ್ಟೂರಿನ ನಿವಾಸಿ ರಾಜೇಶ್ ಅವರ ಮಾಹಿತಿ ಮೇರೆಗೆ ಗಣೇಶ್ ರಾಜ್ ಸರಳೇಬೆಟ್ಟು ಹಾಗೂ ಜಯಶೆಟ್ಟಿಬನ್ನಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಈ ಸಂದರ್ಭದಲ್ಲಿ ಸ್ಥಳೀಯರಾದ ಕೇಶವ ಶೆಟ್ಟಿ ಭಾಸ್ಕರ, ಪ್ರಕಾಶ, ರಮೇಶ,  ರಾಘವೇಂದ್ರ ಸತೀಶ್ ಮುಖಾರಿ ವಿಠಲ ಮೇಸ್ತ್ರಿ ಜೊತೆಗಿದ್ದು ಮಾಹಿತಿ ನೀಡಿ ಸಹಕರಿಸಿದರು.
Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago